ರಾಜ್ಯ

ಧರ್ಮದ ಹಿಂದೆ ಹೋದರೆ ಪಾಕ್‌ನಂತೆ ಭಾರತ ದಿವಾಳಿ ಆಗುತ್ತದೆ: ಯತೀಂದ್ರ ಸಿದ್ದರಾಮಯ್ಯ

ದಾವಣಗೆರೆ: ಧರ್ಮದ ಹಿಂದೆ ಹೋದರೆ ನಮ್ಮ ದೇಶ ಅಭಿವೃದ್ಧಿ ಕಾಣುವುದಿಲ್ಲ. ನಮ್ಮ ದೇಶವನ್ನು ಹಿಂದೂ ರಾಷ್ಟ್ರ ಮಾಡಲು ಹೊರಟಿದ್ದು, ಧರ್ಮದ ಹೆಸರಿನಲ್ಲಿ ಹೋದರೆ ಪಾಕಿಸ್ತಾನ, ಅಫ್ಘಾನಿಸ್ತಾನ ದೇಶಗಳಂತೆ ಭಾರತವು ದಿವಾಳಿ ಆಗುತ್ತದೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ರುದ್ರನಕಟ್ಟೆ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆ ಹಾಗೂ ಸಮಸ್ತ ಕುರುಬ ಸಮುದಾಯದಿಂದ ಬುಧವಾರ ಆಯೋಜಿಸಿದ್ದ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶ ಹಿಂದೂ ರಾಷ್ಟ್ರವಾದರೆ ಅಭಿವೃದ್ಧಿಯಾಗುವುದಿಲ್ಲ, ಧರ್ಮದ ಹಿಂದೇ ಹೋದ ಪಾಕಿಸ್ತಾನ, ಅಫ್ಘಾನಿಸ್ತಾನದ ಆರ್ಥಿಕ ಪರಿಸ್ಥಿತಿ ಎಲ್ಲರಿಗೂ ಗೊತ್ತಿರುವ ವಿಚಾರ. ಇದೇ ರೀತಿ ನಮ್ಮ ದೇಶಕ್ಕೂ ಅಪಾಯ ಗ್ಯಾರಂಟಿಯಾಗಿದ್ದು ಎಚ್ಚರದಿಂದಿರಿ ಹಿಂದೂ ಸ್ಥಾಪನೆಗೆ ಅವಕಾಶ ಕೊಡಬೇಡಿ. ಒಂದು ವೇಳೆ ಅವಕಾಶ ಕೊಟ್ಟರೆ ಭಾರತವು ದಿವಾಳಿಯಾಗುತ್ತದೆ ಎಂದಿದ್ದಾರೆ.

ಇಂದು ಜಾತ್ಯಾತೀತ ತತ್ವಕ್ಕೆ ಅಪಾಯ ಎದುರಾಗಿದೆ, ಭಾರತವನ್ನು ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಹಿಂದು ರಾಷ್ಟ್ರ ಮಾಡಲು ಹೊರಟಿದೆ. ಇದಕ್ಕೆ ಅವಕಾಶ ಕೊಡಲೇ ಬೇಡಿ. ನಮ್ಮ ದೇಶದಲ್ಲಿ ಜಾತ್ಯಾತೀತ ತತ್ವ ಪಾಲಿಸಬೇಕು ಎಂದಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಎರಡನೇ ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿದೆ. ಐದು ವರ್ಷ ಸಿಎಂ ಆಗಿ ಮುಂದುವರೆಯಬೇಕು. ಲೋಕಸಭೆ ಚುನಾವಣೆ ಹತ್ತಿರವಿದ್ದು ಎಲ್ಲರೂ ಕಾಂಗ್ರೆಸಸ ಬೆಂಬಲಿಸಿ ಎಂದು ಯತೀಂದ್ರ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

andolanait

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

7 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

8 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

9 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

11 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

14 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

14 hours ago