ರಾಜ್ಯ

ಶೀಘ್ರದಲ್ಲೇ ಭಾರತ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆ ದೇಶವಾಗಲಿದೆ: ಪ್ರಧಾನಿ ಮೋದಿ ವಿಶ್ವಾಸ

ಬೆಂಗಳೂರು: ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ಕನ್ನಡದಲ್ಲೇ ಭಾಷಣ ಆರಂಭಿಸಿದರು.

ಬೆಂಗಳೂರು ಅಧಿದೇವತೆ ಅಣ್ಣಮ್ಮ ತಾಯಿಗೆ ನಮನಗಳು. ನಾಡಪ್ರಭು ಕೆಂಪೇಗೌಡರಿಗೆ ನಮನಗಳು ಎಂದು ಸ್ಮರಿಸಿ ಬೆಂಗಳೂರು ಮಹಾನಗರ ಭವಿಷ್ಯದ ಕನಸನ್ನು ಸಾಕಾರಗೊಳಿಸುತ್ತಿದೆ ಎಂದು ಹೇಳಿದರು.

ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಆಪರೇಷನ್‌ ಸಿಂಧೂರ ನಡೆಸಿ ಭಾರತ ವಿಶ್ವರೂಪದರ್ಶಿಸಿದೆ. ಇಡೀ ಜಗತ್ತು ನವ ಭಾರತದ ರೂಪವನ್ನು ಕಂಡಿದೆ. ಮೇಕ್ ಇನ್‌ ಇಂಡಿಯಾ ಶಕ್ತಿಯನ್ನು ತೋರಿಸಿದ್ದೇವೆ. ಆಪರೇಷನ್‌ ಸಿಂಧೂರ ಬಳಿಕ ನಾನು ಮೊದಲ ಬಾರಿಗೆ ಬೆಂಗಳೂರಿಗೆ ಬಂದಿದ್ದೇನೆ. ಆಪರೇಷನ್‌ ಸಿಂಧೂರ ಸಫಲತೆಯ ಹಿಂದೆ ಮೇಕ್‌ ಇನ್‌ ಇಂಡಿಯಾ ಶಕ್ತಿ ಇದೆ. ಇದರಲ್ಲಿ ಬೆಂಗಳೂರು, ಕರ್ನಾಟಕದ ಯುವ ತಂತ್ರಜ್ಞಾನ ಇದೆ ಎಂದು ಹೇಳಿದರು.

ಬೆಂಗಳೂರು ನಗರ ನವ ಭಾರತದ ಸಂಕೇತವಾಗಿದೆ. ಗ್ಲೋಬಲ್‌ ಐಟಿಯಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದೆ. ಬೆಂಗಳೂರು ನಗರದ ಯಶಸ್ವಿಗೆ ಇಲ್ಲಿನ ಜನರ ಶ್ರಮ, ಪ್ರತಿಭೆ ಕಾರಣವಾಗಿದೆ. ಭವಿಷ್ಯಕ್ಕಾಗಿ ಬೆಂಗಳೂರಿನಂತಹ ನಗರಗಳನ್ನು ರೂಪಿಸಬೇಕು. ಅದಕ್ಕಾಗಿ ಕೇಂದ್ರ ಸರ್ಕಾರ ಸಾವಿರಾರು ಕೋಟಿ ಅನುದಾನ ನೀಡುತ್ತಿದೆ ಎಂದು ಹೇಳಿದರು.

ಬೆಂಗಳೂರನ್ನು ಭವಿಷ್ಯದ ದಿನಕ್ಕಾಗಿ ರೂಪಿಸಬೇಕಾಗಿದೆ. ಬೆಂಗಳೂರು ನಗರ ಹೊಸ ಭಾರತದ ರೂಪಕ. ಜಾಗತಿಕ ಐಟಿ ಕ್ಷೇತ್ರದಲ್ಲಿ ಛಾಪು ಮೂಡಿಸಿದೆ. ನಿಮ್ಮೆಲ್ಲರ ಶ್ರಮ. ಪ್ರತಿಭೆಯಿಂದ ಇದರ ಹಿಂದೆ ಇದೆ. ನಗರ ದಕ್ಷ ಸುರಕ್ಷಿತವಾಗಿದ್ದರೆ ನಾವು ಅಭಿವೃದ್ಧಿ ಹೊಂದುತ್ತೇವೆ. ಶೀಘ್ರದಲ್ಲೇ ಭಾರತ ವಿಶ್ವದ ಅತಿದೊಡ್ಡ ಮೂರನೇ ಆರ್ಥಿಕತೆ ದೇಶವಾಗಲಿದೆ. 10ನೇ ಸ್ಥಾನದಿಂದ 4ನೇ ಸ್ಥಾನಕ್ಕೆ ಬಂದಿದ್ದೇವೆ. ಶೀಘ್ರವೇ ಭಾರತದ ಆರ್ಥಿಕತೆ ವಿಶ್ವದ ಅತಿದೊಡ್ಡ ಮೂರನೇ ಆರ್ಥಿಕತೆ ದೇಶವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

1 hour ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

2 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

3 hours ago

ಭಾರತ್‌ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…

3 hours ago

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಮಂಡ್ಯ ರಮೇಶ್, ಸಾಧು ಕೋಕಿಲಾ ಕೇಸ್‌ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…

4 hours ago

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

7 hours ago