pm (3)
ಬೆಂಗಳೂರು: ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ಕನ್ನಡದಲ್ಲೇ ಭಾಷಣ ಆರಂಭಿಸಿದರು.
ಬೆಂಗಳೂರು ಅಧಿದೇವತೆ ಅಣ್ಣಮ್ಮ ತಾಯಿಗೆ ನಮನಗಳು. ನಾಡಪ್ರಭು ಕೆಂಪೇಗೌಡರಿಗೆ ನಮನಗಳು ಎಂದು ಸ್ಮರಿಸಿ ಬೆಂಗಳೂರು ಮಹಾನಗರ ಭವಿಷ್ಯದ ಕನಸನ್ನು ಸಾಕಾರಗೊಳಿಸುತ್ತಿದೆ ಎಂದು ಹೇಳಿದರು.
ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಆಪರೇಷನ್ ಸಿಂಧೂರ ನಡೆಸಿ ಭಾರತ ವಿಶ್ವರೂಪದರ್ಶಿಸಿದೆ. ಇಡೀ ಜಗತ್ತು ನವ ಭಾರತದ ರೂಪವನ್ನು ಕಂಡಿದೆ. ಮೇಕ್ ಇನ್ ಇಂಡಿಯಾ ಶಕ್ತಿಯನ್ನು ತೋರಿಸಿದ್ದೇವೆ. ಆಪರೇಷನ್ ಸಿಂಧೂರ ಬಳಿಕ ನಾನು ಮೊದಲ ಬಾರಿಗೆ ಬೆಂಗಳೂರಿಗೆ ಬಂದಿದ್ದೇನೆ. ಆಪರೇಷನ್ ಸಿಂಧೂರ ಸಫಲತೆಯ ಹಿಂದೆ ಮೇಕ್ ಇನ್ ಇಂಡಿಯಾ ಶಕ್ತಿ ಇದೆ. ಇದರಲ್ಲಿ ಬೆಂಗಳೂರು, ಕರ್ನಾಟಕದ ಯುವ ತಂತ್ರಜ್ಞಾನ ಇದೆ ಎಂದು ಹೇಳಿದರು.
ಬೆಂಗಳೂರು ನಗರ ನವ ಭಾರತದ ಸಂಕೇತವಾಗಿದೆ. ಗ್ಲೋಬಲ್ ಐಟಿಯಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದೆ. ಬೆಂಗಳೂರು ನಗರದ ಯಶಸ್ವಿಗೆ ಇಲ್ಲಿನ ಜನರ ಶ್ರಮ, ಪ್ರತಿಭೆ ಕಾರಣವಾಗಿದೆ. ಭವಿಷ್ಯಕ್ಕಾಗಿ ಬೆಂಗಳೂರಿನಂತಹ ನಗರಗಳನ್ನು ರೂಪಿಸಬೇಕು. ಅದಕ್ಕಾಗಿ ಕೇಂದ್ರ ಸರ್ಕಾರ ಸಾವಿರಾರು ಕೋಟಿ ಅನುದಾನ ನೀಡುತ್ತಿದೆ ಎಂದು ಹೇಳಿದರು.
ಬೆಂಗಳೂರನ್ನು ಭವಿಷ್ಯದ ದಿನಕ್ಕಾಗಿ ರೂಪಿಸಬೇಕಾಗಿದೆ. ಬೆಂಗಳೂರು ನಗರ ಹೊಸ ಭಾರತದ ರೂಪಕ. ಜಾಗತಿಕ ಐಟಿ ಕ್ಷೇತ್ರದಲ್ಲಿ ಛಾಪು ಮೂಡಿಸಿದೆ. ನಿಮ್ಮೆಲ್ಲರ ಶ್ರಮ. ಪ್ರತಿಭೆಯಿಂದ ಇದರ ಹಿಂದೆ ಇದೆ. ನಗರ ದಕ್ಷ ಸುರಕ್ಷಿತವಾಗಿದ್ದರೆ ನಾವು ಅಭಿವೃದ್ಧಿ ಹೊಂದುತ್ತೇವೆ. ಶೀಘ್ರದಲ್ಲೇ ಭಾರತ ವಿಶ್ವದ ಅತಿದೊಡ್ಡ ಮೂರನೇ ಆರ್ಥಿಕತೆ ದೇಶವಾಗಲಿದೆ. 10ನೇ ಸ್ಥಾನದಿಂದ 4ನೇ ಸ್ಥಾನಕ್ಕೆ ಬಂದಿದ್ದೇವೆ. ಶೀಘ್ರವೇ ಭಾರತದ ಆರ್ಥಿಕತೆ ವಿಶ್ವದ ಅತಿದೊಡ್ಡ ಮೂರನೇ ಆರ್ಥಿಕತೆ ದೇಶವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…