ಬೆಂಗಳೂರು: ಭಾರತದ ಖೋ-ಖೋ ತಂಡ ಚೊಚ್ಚಲ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ಮಹಿಳಾ ಹಾಗೂ ಪುರುಷರ ತಂಡ ಗೆಲುವು ಸಾಧಿಸಿದ್ದು, ಸಿಎಂ ಸಿದ್ದರಾಮಯ್ಯ ಟ್ವೀಟ್ ಮುಖಾಂತರ ಶುಭಾಶಯ ತಿಳಿಸಿ ಶ್ಲಾಘಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮೊಟ್ಟ ಮೊದಲ
ಖೋ-ಖೋ ವಿಶ್ವಕಪ್ ಪಂದ್ಯಾಕೂಟದಲ್ಲಿ ನೇಪಾಳವನ್ನು ಬಗ್ಗುಬಡಿದು ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಭಾರತದ ಮಹಿಳಾ ಮತ್ತು ಪುರುಷರ ಖೋ-ಖೋ ತಂಡಕ್ಕೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಚೊಚ್ಚಲ ಖೋ-ಖೋ ವಿಶ್ವಕಪ್ನಲ್ಲಿ ಭಾರತೀಯ ತಂಡಗಳು ಮಾಡಿರುವ ಈ ಅಮೋಘ ಸಾಧನೆ
ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಉಳಿಯಲಿದೆ. ಇನ್ನೂ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಕುರುಬೂರಿನ ಯುವತಿ ಬಿ.ಚೈತ್ರಾ ಅವರು ವಿಶ್ವವಿಜೇತ ಮಹಿಳಾ ಖೋ-ಖೋ ತಂಡದಲ್ಲಿ ಭಾಗಿಯಾಗಿರುವುದು ನಮ್ಮ ನಾಡಿಗೆ ಹೆಮ್ಮೆಯ ಸಂಗತಿಯಾಗಿದೆ. ಅಲ್ಲದೇ ಈ ವಿಶ್ವಕಪ್ನ ಗೆಲುವು ಭಾರತೀಯರ ಪಾಲಿಗೆ ಇದೊಂದು ಐತಿಹಾಸಿಕ ದಿನವಾಗಿದೆ ಎಂದು ಹೇಳಿದ್ದಾರೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…