ಬೆಂಗಳೂರು: ಭಾರತದ ಖೋ-ಖೋ ತಂಡ ಚೊಚ್ಚಲ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ಮಹಿಳಾ ಹಾಗೂ ಪುರುಷರ ತಂಡ ಗೆಲುವು ಸಾಧಿಸಿದ್ದು, ಸಿಎಂ ಸಿದ್ದರಾಮಯ್ಯ ಟ್ವೀಟ್ ಮುಖಾಂತರ ಶುಭಾಶಯ ತಿಳಿಸಿ ಶ್ಲಾಘಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮೊಟ್ಟ ಮೊದಲ
ಖೋ-ಖೋ ವಿಶ್ವಕಪ್ ಪಂದ್ಯಾಕೂಟದಲ್ಲಿ ನೇಪಾಳವನ್ನು ಬಗ್ಗುಬಡಿದು ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಭಾರತದ ಮಹಿಳಾ ಮತ್ತು ಪುರುಷರ ಖೋ-ಖೋ ತಂಡಕ್ಕೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಚೊಚ್ಚಲ ಖೋ-ಖೋ ವಿಶ್ವಕಪ್ನಲ್ಲಿ ಭಾರತೀಯ ತಂಡಗಳು ಮಾಡಿರುವ ಈ ಅಮೋಘ ಸಾಧನೆ
ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಉಳಿಯಲಿದೆ. ಇನ್ನೂ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಕುರುಬೂರಿನ ಯುವತಿ ಬಿ.ಚೈತ್ರಾ ಅವರು ವಿಶ್ವವಿಜೇತ ಮಹಿಳಾ ಖೋ-ಖೋ ತಂಡದಲ್ಲಿ ಭಾಗಿಯಾಗಿರುವುದು ನಮ್ಮ ನಾಡಿಗೆ ಹೆಮ್ಮೆಯ ಸಂಗತಿಯಾಗಿದೆ. ಅಲ್ಲದೇ ಈ ವಿಶ್ವಕಪ್ನ ಗೆಲುವು ಭಾರತೀಯರ ಪಾಲಿಗೆ ಇದೊಂದು ಐತಿಹಾಸಿಕ ದಿನವಾಗಿದೆ ಎಂದು ಹೇಳಿದ್ದಾರೆ.
ಮಂಡ್ಯ: ಮಗಳ ಸಾವಿನಿಂದ ಮನನೊಂದ ತಾಯಿ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ…
ಚಾಮರಾಜನಗರ : ಹಲವು ಕುಟುಂಬಗಳನ್ನೇ ಹಾಳು ಮಾಡಿ ಯುವ ಸಮೂಹವನ್ನು ಬೀದಿಗೆ ಬೀಳುವಂತೆ ಮಾಡುತ್ತಿರುವ ಆನ್ಲೈನ್ ಗೇಮ್ಗಳನ್ನು ನಿಷೇಧಿಸಬೇಕು ಎಂದು…
ಹುಣಸೂರು: ಇಲ್ಲಿನ ಬನ್ನಿಕುಪ್ಪೆ ಗ್ರಾಮದ ಮಾರಿಗುಡಿ ಆವರಣದಲ್ಲಿ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಅಧಿಕಾರಿ ಅಶೋಕ್…
ಮೈಸೂರು: ಗ್ಯಾರಂಟಿ ಯೋಜನೆಗಳು ಯಾವುದೇ ಧರ್ಮ, ಜಾತಿ ಮತ್ತು ಪಕ್ಷಕ್ಕೆ ಸೀಮಿತವಾಗಿಲ್ಲ. ಗ್ಯಾರಂಟಿ ಯೋಜನೆಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ.…
ಸಿದ್ದಾಪುರ : ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿದ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮದ ವಿರುದ್ದ ರೈತ,…
ಮಂಡ್ಯ: ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತ ವಲಯವಾಗಿಸಿ ದೃಢೀಕರಣ ಪತ್ರ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ…