ರಾಜ್ಯ

ಆಫ್ರಿಕಾದಲ್ಲಿ ಭಾರತದ ಮೊದಲ ಸರ್ಕಾರಿ ಕೌಶಲ್ಯ ಪಾಲುದಾರಿಕೆ

ಬೆಂಗಳೂರು : ಭಾರತ-ಆಫ್ರಿಕಾ ನಡುವಿನ ಮಹತ್ವದ ಸಹಕಾರದಲ್ಲಿ ಹೆಗ್ಗುರುತು ಮೂಡಿದೆ. ಕರ್ನಾಟಕದ ಸರ್ಕಾರಿ ಸ್ವಾಮ್ಯದ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರವನ್ನು (GTTC) ನಮೀಬಿಯಾ ಈಗ ತನ್ನ ತಾಂತ್ರಿಕ ಜ್ಞಾನ ಮತ್ತು ವೃತ್ತಿಪರ ತರಬೇತಿ ಪಾಲುದಾರನಾಗಿ ಆಯ್ಕೆ ಮಾಡಿದೆ.

ಆಫ್ರಿಕಾದ ನೆಲದಲ್ಲಿ ಭಾರತೀಯ ಸರ್ಕಾರಿ ಜ್ಞಾನ ಸಂಸ್ಥೆಯೊಂದು ಮೀಸಲಾದ ಘಟಕವನ್ನು ಅಲ್ಲಿ ಸ್ಥಾಪಿಸುತ್ತಿದೆ. ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರ ಸಮ್ಮುಖದಲ್ಲಿ ಜಿಟಿಟಿಸಿಯ ಡಾ. ವೈ.ಕೆ. ದಿನೇಶ್ ಕುಮಾರ್ ಮತ್ತು ಆಫ್ರಿಕಾ ಇಂಡಿಯಾ ಎಕನಾಮಿಕ್ ಫೌಂಡೇಶನ್ (AIEF) ಪ್ರಧಾನ ಕಾರ್ಯದರ್ಶಿ ಅನಿಲ್ ಶಿಂಧೆ ಅವರು ಸಹಯೋಗವನ್ನು ಔಪಚಾರಿಕಗೊಳಿಸುವ ತಿಳಿವಳಿಕೆ ಒಪ್ಪಂದಕ್ಕೆ (MoU) ಸಹಿ ಹಾಕಿದರು.

ಐದು ದಶಕಗಳ ಇತಿಹಾಸ ಹೊಂದಿರುವ ಜಿಟಿಟಿಸಿ ಕರ್ನಾಟಕದಾದ್ಯಂತ 20 ಕ್ಕೂ ಹೆಚ್ಚು ಕೇಂದ್ರಗಳನ್ನು ಹೊಂದಿದೆ. ಪ್ರತಿ ವರ್ಷ ಸಾವಿರಾರು ಜನರಿಗೆ ನಿಖರ ಉಪಕರಣ ತಯಾರಿಕೆ, ಸಿಎನ್‌ಸಿ ಕಾರ್ಯಾಚರಣೆ, ಮೆಕಾಟ್ರಾನಿಕ್ಸ್ ಮತ್ತು ರೊಬೊಟಿಕ್ಸ್‌ನಲ್ಲಿ ತರಬೇತಿ ನೀಡುತ್ತಿದೆ. ಇದರ ಹಳೆಯ ವಿದ್ಯಾರ್ಥಿಗಳ ಜಾಲವು ಐದು ಲಕ್ಷಕ್ಕೂ ಹೆಚ್ಚು ಕೌಶಲ್ಯಪೂರ್ಣ ವೃತ್ತಿಪರರನ್ನು ಹೊಂದಿದೆ ಮತ್ತು ಅದರ ಪಠ್ಯಕ್ರಮವು ಪ್ರಸ್ತುತ ಉದ್ಯಮದ ಅಗತ್ಯಗಳಿಗೆ ನಿಕಟವಾಗಿ ಹೊಂದಿಕೊಂಡಿದೆ.

ಜಿಟಿಟಿಸಿಯು ಆಫ್ರಿಕಾದ ಕೈಗಾರಿಕಾ ಕೌಶಲ್ಯ ಅಗತ್ಯಗಳಿಗೆ ಒಂದು ದೃಢವಾದ ಮಾದರಿಯಾಗಿದೆ. ಇದು “ಆಫ್ರಿಕನ್ ಪರಿಸ್ಥಿತಿಗೆ ಹೊಂದಿಕೊಳ್ಳುವ” ಸಾಮರ್ಥ್ಯವನ್ನು ಹೊಂದಿದೆ. ಈ ಪಾಲುದಾರಿಕೆಯು ನಮೀಬಿಯಾದಲ್ಲಿ ಕೌಶಲ್ಯಪೂರ್ಣ ಪ್ರತಿಭೆಯ ಕಣಜ ನಿರ್ಮಿಸುತ್ತದೆ. ಆಫ್ರಿಕಾದಾದ್ಯಂತ ಜಿಟಿಸಿಸಿ ಪದವೀಧರರಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಸಚಿವರು ತಿಳಿಸಿದರು.

ಕರ್ನಾಟಕ ಮೂಲದ ಎಂಎಸ್‌ಎಂಇಗಳಿಗೆ ಹೆಚ್ಚುವರಿ ಮಾರುಕಟ್ಟೆ ಅವಕಾಶ ಒದಗಿಸಲಿದೆ ಮತ್ತು ಶಿಕ್ಷಣ, ಕೌಶಲ್ಯದಲ್ಲಿ ಜಾಗತಿಕ ಮನ್ನಣೆಯನ್ನು ನೀಡಲಿದೆ. ಶಿಕ್ಷಣ ರಾಜತಾಂತ್ರಿಕತೆಯ ಮೂಲಕ ಕರ್ನಾಟಕದ ಶಕ್ತಿಯನ್ನು ಸಬಲೀಕರಣಗೊಳಿಸಲಿದೆ ಎಂದು ಎಂದು ಸಚಿವರು ಹೇಳಿದರು.

ಜಿಟಿಟಿಸಿಯ ವ್ಯವಸ್ಥಾಪಕ ನಿರ್ದೇಶಕ ಡಾ. ವೈ.ಕೆ ದಿನೇಶ್ ಕುಮಾರ್, ಈ ಉಪಕ್ರಮವು ಕರ್ನಾಟಕವನ್ನು ಕೌಶಲ್ಯ ಅಭಿವೃದ್ಧಿಯಲ್ಲಿ ಜಾಗತಿಕ ನಾಯಕನನ್ನಾಗಿ ಮಾಡಿದೆ ಎಂದು ಹೇಳಿದರು. “ಉಪಕರಣಗಳ ತಯಾರಿಕೆ ಮತ್ತು ಮುಂದುವರಿದ ಉತ್ಪಾದನೆಯಲ್ಲಿ ಜಿಟಿಟಿಸಿಯ ಪರಿಣತಿಯು ಈಗ ಜಾಗತಿಕ ಪರಿಣಾಮ ಬೀರುತ್ತದೆ” ಎಂದು ಅವರು ಹೇಳಿದರು.

ಭಾರತ-ಆಫ್ರಿಕನ್‌ ರಾಷ್ಟ್ರಗಳ ನಡುವೆ ಸಹಯೋಗ: ಭಾರತ ಮತ್ತು 54 ಆಫ್ರಿಕನ್ ರಾಷ್ಟ್ರಗಳ ನಡುವೆ ಜ್ಞಾನ, ತಂತ್ರಜ್ಞಾನ ಮತ್ತು ಹೂಡಿಕೆ ಸಹಯೋಗವನ್ನು ಬೆಳೆಸಲು ಸ್ಥಾಪಿಸಲಾದ ಎಐಇಎಫ್‌, ಅಡಿಸ್ ಅಬಾಬಾದಲ್ಲಿ ನಡೆದ ಶೃಂಗಸಭೆ 2020 ರಲ್ಲಿ ಅದರ ಉಪಕ್ರಮಗಳನ್ನು ಔಪಚಾರಿಕವಾಗಿ ಸ್ವಾಗತಿಸಿದ ಆಫ್ರಿಕನ್ ಒಕ್ಕೂಟದಿಂದ ಅನುಮೋದನೆಗಳನ್ನು ಪಡೆದಿದೆ.

ಎಐಇಎಫ್‌ ಅಧಿಕಾರಿಗಳು ನಮೀಬಿಯಾದ ಪಾಲುದಾರಿಕೆ ಬಗ್ಗೆ ತಿಳಿಸಿದರು. ಯುರೇನಿಯಂ, ವಜ್ರಗಳು, ಚಿನ್ನ ಮತ್ತು ಅಪರೂಪದ ಭೂಮಿಯ ಖನಿಜಗಳು ಸೇರಿದಂತೆ ಅದರ ಶ್ರೀಮಂತ ನೈಸರ್ಗಿಕ ಸಂಪನ್ಮೂಲಗಳು ಹಾಗೂ ಸಮುದ್ರ, ಇಂಧನ, ಕೃಷಿ ವ್ಯವಹಾರ, ಲಾಜಿಸ್ಟಿಕ್ಸ್ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಅದರ ತ್ವರಿತ ಅಭಿವೃದ್ಧಿಯನ್ನು ಉಲ್ಲೇಖಿಸಿದರು. ದೇಶದ ರಾಜಕೀಯ ಸ್ಥಿರತೆ, ಇಂಗ್ಲಿಷ್ ಮಾತನಾಡುವ ಜನಸಂಖ್ಯೆ ಮತ್ತು ವ್ಯವಹಾರ ಸ್ನೇಹಿ ವಾತಾವರಣವು ಭಾರತೀಯ ಕೌಶಲ್ಯ ಮಾದರಿಯನ್ನು ಜಾರಿಗೆ ತರಲಿದೆ. ಅಲ್ಲದೇ ಇದು ಅತ್ಯುತ್ತಮ ಕೌಶಲ್ಯ ತಾಣವಾಗಿರಲಿದೆ.

ಆಂದೋಲನ ಡೆಸ್ಕ್

Recent Posts

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ : ಬೈರತಿ ಸುರೇಶ್

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…

50 mins ago

ವಕ್ಫ್‌ ಒತ್ತುವರಿ ಆಸ್ತಿ ತೆರವಿಗೆ ಕ್ರಮ : ಸಚಿವ ಜಮೀರ್‌ ಅಹಮದ್‌

ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…

1 hour ago

ಒಳಮೀಸಲಾತಿ ಮೂಲಕ ಪರಿಶಿಷ್ಟ ಜಾತಿಗಳನ್ನು ಒಡೆಯುತ್ತಿರುವ ಕಾಂಗ್ರೆಸ್ : ಬಿಎಸ್‌ಪಿ ಆರೋಪ

ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…

2 hours ago

ರಂಜಾನ್, ಯುಗಾದಿ ; ಎಸ್ಪಿ ಕಚೇರಿಯಲ್ಲಿ ಸೌಹಾರ್ದ ಸಭೆ

ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…

2 hours ago

2027ರ ಗಣತಿಗೆ ಡಿಜಿಟಲ್‌ ಸ್ಪರ್ಶ : ದೋಷರಹಿತವಾಗಿ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…

2 hours ago

ಮಹದೇಶ್ವರ ಬೆಟ್ಟ | ವಿವಿಧ ಸೇವೆಗಳಿಂದ 1.16ಕೋಟಿ ಸಂಗ್ರಹ

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…

3 hours ago