ನವದೆಹಲಿ : ಐಎಂಎಫ್ ಕಾರ್ಯನಿರ್ವಾಹಕ ನಿರ್ದೇಶಕರು ಈ ವರ್ಷ ಭಾರತದ ಜಿಡಿಪಿ ಬೆಳವಣಿಗೆಯನ್ನ ಶೇಕಡಾ 7.3ರಷ್ಟು ಇರಲಿದೆ ಎಂದು ಅಂದಾಜಿಸಿದ್ದಾರೆ. ಭಾರತೀಯ ಆರ್ಥಿಕತೆಯ ಆರ್ಥಿಕ ಮೂಲಭೂತ ಅಂಶಗಳು ಬಲವಾಗಿವೆ ಎಂದು ಅವರು ಹೇಳಿದರು.
ಪ್ರಸಕ್ತ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಉತ್ತಮವಾಗಿದೆ. ಇವುಗಳನ್ನ ಮೌಲ್ಯಮಾಪನ ಮಾಡಿದ ನಂತ್ರ ಐಎಂಎಫ್ ತನ್ನ ವಿಶ್ವ ಆರ್ಥಿಕ ಔಟ್ಲುಕ್ ವರದಿಯಲ್ಲಿ ಭಾರತವನ್ನ ವಿಶ್ವದ ಅತಿದೊಡ್ಡ ಆರ್ಥಿಕತೆಯಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಎಂದು ಬಿಂಬಿಸಿದೆ.
ಇನ್ನು ಪಿಎಂ-ಕಿಸಾನ್ ಯೋಜನೆಯಡಿ ರೈತರು ಪಡೆಯುವ 6000 ರೂ.ಗಳ ನೆರವು ಮೊತ್ತವನ್ನ ಹೆಚ್ಚಿಸುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು.
ಕಳೆದ ನಾಲ್ಕು-ಐದು ವರ್ಷಗಳಲ್ಲಿ ಹಣದುಬ್ಬರದ ಸರಾಸರಿ ದರವು 5% ರಿಂದ 6% ಆಗಿರುವುದರಿಂದ ರೈತರಿಗೆ ಪ್ರಸ್ತುತ 6000 ರೂ.ಗಳ ಮೊತ್ತವನ್ನು 8000 ರೂ.ಗಳಿಂದ 8500 ಸಾವಿರ ಅಥವಾ 9000 ರೂ.ಗೆ ಹೆಚ್ಚಿಸುವುದು ಉತ್ತಮ ಎಂದು ಐಎಂಎಫ್ ಕಾರ್ಯನಿರ್ವಾಹಕ ನಿರ್ದೇಶಕರು ಹೇಳಿದರು.
ಅಂದಾಜಿನ ಪ್ರಕಾರ, ಭಾರತದ ಜಿಡಿಪಿ ಬೆಳವಣಿಗೆಯು ಈ ವರ್ಷ 7.3% ಆಗಿರಬಹುದು. “2030 ರ ವೇಳೆಗೆ ಭಾರತವು 7 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಬಹುದು”
ಮುಂದಿನ 3 ವರ್ಷಗಳಲ್ಲಿ ಭಾರತದ ಆರ್ಥಿಕತೆಯ ವೇಗವು ಶೇಕಡಾ 7ರಷ್ಟಿದ್ದರೆ, 2026-27ರ ವೇಳೆಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಬಹುದು ಎಂದು ಅವರು ಹೇಳಿದರು.
2030ರ ವೇಳೆಗೆ ಭಾರತವು 7 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಬಹುದು ಎಂಬುದು ನಮ್ಮ ಅಂದಾಜು. ಮುಂದಿನ 2-3 ವರ್ಷಗಳಲ್ಲಿ ಜಿಎಸ್ಟಿ ಸಂಗ್ರಹವು ಪ್ರತಿ ತಿಂಗಳು 2 ಲಕ್ಷ ಕೋಟಿಗೆ ಹೆಚ್ಚಾಗುವ ಸಾಧ್ಯತೆಯಿದೆ.
ವೋಟ್ ಆನ್ ಅಕೌಂಟ್ ನಲ್ಲಿ ರೈತರಿಗೆ ಹೊಸ ಪ್ರಸ್ತಾಪ ಇರಬಹುದು, ಮಧ್ಯಮ ವರ್ಗದವರಿಗೂ ಹೊಸ ಘೋಷಣೆ ಇರಬಹುದು ಎಂದು ಅವರು ಊಹಿಸಿದ್ದಾರೆ. ವೈಯಕ್ತಿಕ ಆದಾಯ ತೆರಿಗೆಯಲ್ಲಿ ಸ್ವಲ್ಪ ಪರಿಹಾರವೂ ಇರಬಹುದು.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…