ರಾಜ್ಯ

ಭಾರತದ ಜಿಡಿಪಿ ೭.೩ರಷ್ಟು ಇರಲಿದೆ : ಐಎಂಎಫ್‌ ಕಾರ್ಯನಿರ್ವಾಹಕ ನಿರ್ದೇಶಕ !

ನವದೆಹಲಿ : ಐಎಂಎಫ್ ಕಾರ್ಯನಿರ್ವಾಹಕ ನಿರ್ದೇಶಕರು ಈ ವರ್ಷ ಭಾರತದ ಜಿಡಿಪಿ ಬೆಳವಣಿಗೆಯನ್ನ ಶೇಕಡಾ 7.3ರಷ್ಟು ಇರಲಿದೆ ಎಂದು ಅಂದಾಜಿಸಿದ್ದಾರೆ. ಭಾರತೀಯ ಆರ್ಥಿಕತೆಯ ಆರ್ಥಿಕ ಮೂಲಭೂತ ಅಂಶಗಳು ಬಲವಾಗಿವೆ ಎಂದು ಅವರು ಹೇಳಿದರು.

ಪ್ರಸಕ್ತ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಉತ್ತಮವಾಗಿದೆ. ಇವುಗಳನ್ನ ಮೌಲ್ಯಮಾಪನ ಮಾಡಿದ ನಂತ್ರ ಐಎಂಎಫ್ ತನ್ನ ವಿಶ್ವ ಆರ್ಥಿಕ ಔಟ್ಲುಕ್ ವರದಿಯಲ್ಲಿ ಭಾರತವನ್ನ ವಿಶ್ವದ ಅತಿದೊಡ್ಡ ಆರ್ಥಿಕತೆಯಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಎಂದು ಬಿಂಬಿಸಿದೆ.

ಇನ್ನು ಪಿಎಂ-ಕಿಸಾನ್ ಯೋಜನೆಯಡಿ ರೈತರು ಪಡೆಯುವ 6000 ರೂ.ಗಳ ನೆರವು ಮೊತ್ತವನ್ನ ಹೆಚ್ಚಿಸುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು.

ಕಳೆದ ನಾಲ್ಕು-ಐದು ವರ್ಷಗಳಲ್ಲಿ ಹಣದುಬ್ಬರದ ಸರಾಸರಿ ದರವು 5% ರಿಂದ 6% ಆಗಿರುವುದರಿಂದ ರೈತರಿಗೆ ಪ್ರಸ್ತುತ 6000 ರೂ.ಗಳ ಮೊತ್ತವನ್ನು 8000 ರೂ.ಗಳಿಂದ 8500 ಸಾವಿರ ಅಥವಾ 9000 ರೂ.ಗೆ ಹೆಚ್ಚಿಸುವುದು ಉತ್ತಮ ಎಂದು ಐಎಂಎಫ್ ಕಾರ್ಯನಿರ್ವಾಹಕ ನಿರ್ದೇಶಕರು ಹೇಳಿದರು.

ಅಂದಾಜಿನ ಪ್ರಕಾರ, ಭಾರತದ ಜಿಡಿಪಿ ಬೆಳವಣಿಗೆಯು ಈ ವರ್ಷ 7.3% ಆಗಿರಬಹುದು. “2030 ರ ವೇಳೆಗೆ ಭಾರತವು 7 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಬಹುದು”

ಮುಂದಿನ 3 ವರ್ಷಗಳಲ್ಲಿ ಭಾರತದ ಆರ್ಥಿಕತೆಯ ವೇಗವು ಶೇಕಡಾ 7ರಷ್ಟಿದ್ದರೆ, 2026-27ರ ವೇಳೆಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಬಹುದು ಎಂದು ಅವರು ಹೇಳಿದರು.

2030ರ ವೇಳೆಗೆ ಭಾರತವು 7 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಬಹುದು ಎಂಬುದು ನಮ್ಮ ಅಂದಾಜು. ಮುಂದಿನ 2-3 ವರ್ಷಗಳಲ್ಲಿ ಜಿಎಸ್ಟಿ ಸಂಗ್ರಹವು ಪ್ರತಿ ತಿಂಗಳು 2 ಲಕ್ಷ ಕೋಟಿಗೆ ಹೆಚ್ಚಾಗುವ ಸಾಧ್ಯತೆಯಿದೆ.

ವೋಟ್ ಆನ್ ಅಕೌಂಟ್ ನಲ್ಲಿ ರೈತರಿಗೆ ಹೊಸ ಪ್ರಸ್ತಾಪ ಇರಬಹುದು, ಮಧ್ಯಮ ವರ್ಗದವರಿಗೂ ಹೊಸ ಘೋಷಣೆ ಇರಬಹುದು ಎಂದು ಅವರು ಊಹಿಸಿದ್ದಾರೆ. ವೈಯಕ್ತಿಕ ಆದಾಯ ತೆರಿಗೆಯಲ್ಲಿ ಸ್ವಲ್ಪ ಪರಿಹಾರವೂ ಇರಬಹುದು.

andolanait

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

2 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

2 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

2 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

9 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

9 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

10 hours ago