ಬೆಂಗಳೂರು : ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುವಾಹಟಿ – ಚೆನ್ನೈ ನಡುವಿನ ಇಂಡಿಗೊ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ಜೂ.19 ಗುರುವಾರ ನಡೆದಿದೆ.
ವಿಮಾನ ಗುವಾಹಟಿಯಿಂದ ಚೆನ್ನೈಗೆ ತೆರಳುತ್ತಿತ್ತು. ಇಂಧನ ಖಾಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಪೈಲಟ್ ರೂಂಗೆ ಮೇಡೇ ಸಂದೇಶ ರವಾನಿಸಿದ್ದಾರೆ. ಕೊಡಲೇ ಅಧಿಕಾರಿಗಳು ವಿಮಾನವನ್ನು ಬೆಂಗಳೂರಿನಲ್ಲಿ ಸೇಫ್ ಲ್ಯಾಂಡ್ ಮಾಡಲು ಸೂಚಿಸಿದ್ದರು. ಇದರಂತೆ ಫೈಲಟ್ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದರು ಎಂದು ವಿಮಾನಯಾನ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇಂಡಿಗೊ 6E-6764 ವಿಮಾನ ಸಂಜೆ 4.40ಕ್ಕೆ ಗುವಾಹಟಿ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿತ್ತು. ಇದು 7.45ಕ್ಕೆ ಚೆನ್ನೈನಲ್ಲಿ ಲ್ಯಾಂಡ್ ಆಗಬೇಕಿತ್ತು. ಮಧ್ಯದಲ್ಲಿ ಇಂಧನ ಖಾಲಿಯ ಅಲರಾಂ ಸೂಚನೆ ಬಂದಿದ್ದರಿಂದ ವಿಮಾನ ಚೆನ್ನೈ ತಲುಪುವುದು ಅಸಾಧ್ಯವಾಗಿತ್ತು. ಈ ವೇಳೆ ಪೈಲಟ್ ಮೇಡೇ ಸಂದೇಶ ರವಾನಿಸಿ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದರು.
ವಿಮಾನದಲ್ಲಿ 168 ಪ್ರಯಾಣಿಕರು, ಇಬ್ಬರು ಪೈಲಟ್, ಐವರು ಗಗನಸಖಿಯರು ಸೇರಿ 175 ಮಂದಿಯಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…