ಬೆಂಗಳೂರು : ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದ ಬಡವರ ಆರಾಧ್ಯ ದೈವ ಆಗಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಸಂಸತ್ನಲ್ಲಿ ಇವರನ್ನು ದುರ್ಗಿ ಅಂತ ಕರೆದಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಂದು ಇಂದಿರಾಗಾಂಧಿ 39ನೇ ಪುಣ್ಯ ಸ್ಮರಣೆಯ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಲಾಲ್ ಬಹಾದ್ದೂರ್ ಶಾಸ್ತ್ರಿ ಸಂಪುಟದಲ್ಲಿ ಮಂತ್ರಿ ಆಗಿದ್ರು. ಲಾಲ್ ಬಹಾದ್ದೂರ್ ಶಾಸ್ತ್ರಿ ನಂತರ ದೇಶದ ಪ್ರಧಾನಿ ಆದರು. ದೇಶದ ಬಡವರ ಆರಾಧ್ಯ ದೈವ ಆಗಿದ್ರು ಇಂದಿರಾಗಾಂಧಿ. ನಾನು ಜನತಾ ಪಾರ್ಟಿಯಲ್ಲಿ ಇದ್ದೆ. ಹಾರೋಹಳ್ಳಿಯಲ್ಲಿ ವೋಟ್ ಕೇಳೋಕೆ ಹೋಗಿದ್ದೆ. ರಾಜಶೇಖರ ಮೂರ್ತಿ ಊರಿನ ಜನರನ್ನ ಸೇರಿಸಿ ಮಾತಾಡುತ್ತಿದ್ದರು. ನಾನು ಮನೆ ಮನೆಗೆ ಹೋಗಿ ನೋಡಿದ್ರೆ ಇಂದಿರಾಗಾಂಧಿ ಫೋಟೋ ಇತ್ತು. ನಾನು ಆಗ ಕೇಳಿದಾಗ ನಾವು ಎಲ್ಲಾ ಇಂದಿರಾಗಾಂಧಿಗೆ ವೋಟ್ ಹಾಕೋದು ಅಂತ ಹೇಳಿದ್ರು. ಆಗ ನಾನು ರಾಜಶೇಖರ ಅವರಿಗೆ ಇಲ್ಲಿ ವೋಟ್ ಬರೊಲ್ಲ ಅಂತ ಹೇಳಿದ್ದೆ. ಅಷ್ಟರ ಮಟ್ಟಿಗೆ ಆರಾಧ್ಯ ದೈವ ಅಂತ ಪೂಜೆ ಮಾಡುತ್ತಿದ್ದರು. ಇಂತಹ ಪಾಪ್ಯುಲರ್ ಲೀಡರ್ ಅನ್ನು ಇನ್ನೊಬ್ಬರು ದೇಶದಲ್ಲಿ ನೋಡಿಲ್ಲ ಎಂದರು.
ದೇಶದಲ್ಲಿ ಗಾಂಧಿ, ಇಂದಿರಾಗಾಂಧಿ, ರಾಜೀವ್ ಗಾಂಧಿ ಹತ್ಯೆ ಮರೆಯೋಕೆ ಆಗಲ್ಲ. ಇವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಇವರನ್ನ ಉಕ್ಕಿನ ಮಹಿಳೆ ಅಂತ ಕರೆಯುತ್ತಾರೆ. ವಾಜಪೇಯಿ ಅವರು ಸಂಸತ್ ನಲ್ಲಿ ಇವರನ್ನು ದುರ್ಗಿ ಅಂತ ಕರೆದಿದ್ದರು ಎಂದರು. ಇನ್ನು ಬಿಜೆಪಿ ಅವರು ರಾಷ್ಟ್ರ ಪ್ರೇಮದ ಬಗ್ಗೆ ಮಾತಾಡ್ತಾರೆ. ಆದರೆ ಅವರಲ್ಲಿ ಒಬ್ಬರೂ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿಲ್ಲ. ದೇಶಕ್ಕೆ ಬಲಿದಾನ ಮಾಡಿದ್ದು ನೆಹರು ಕುಟುಂಬ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಚೆಲುವರಾಯಸ್ವಾಮಿ, ಮಾಜಿ ಸಚಿವ ರೇವಣ್ಣ, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕ ನರೇಂದ್ರ ಸ್ವಾಮಿ, ರಾಣಿ ಸತೀಶ್, ನಜೀರ್ ಅಹಮದ್ ಸೇರಿ ಹಲವು ನಾಯಕರು ಭಾಗಿಯಾಗಿದ್ದು, ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…
ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…
ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…
ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…
ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಘಟನೆ ಹಾಗೂ…
ಮೈಸೂರು: ಬಾಲಿವುಡ್ನಿಂದ ಸ್ಯಾಂಡಲ್ವುಡ್ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್ ನಟರಿಗೆ ಕೊರಿಯೋಗ್ರಾಫರ್ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್…