ಬೆಂಗಳೂರು : ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದ ಬಡವರ ಆರಾಧ್ಯ ದೈವ ಆಗಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಸಂಸತ್ನಲ್ಲಿ ಇವರನ್ನು ದುರ್ಗಿ ಅಂತ ಕರೆದಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಂದು ಇಂದಿರಾಗಾಂಧಿ 39ನೇ ಪುಣ್ಯ ಸ್ಮರಣೆಯ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಲಾಲ್ ಬಹಾದ್ದೂರ್ ಶಾಸ್ತ್ರಿ ಸಂಪುಟದಲ್ಲಿ ಮಂತ್ರಿ ಆಗಿದ್ರು. ಲಾಲ್ ಬಹಾದ್ದೂರ್ ಶಾಸ್ತ್ರಿ ನಂತರ ದೇಶದ ಪ್ರಧಾನಿ ಆದರು. ದೇಶದ ಬಡವರ ಆರಾಧ್ಯ ದೈವ ಆಗಿದ್ರು ಇಂದಿರಾಗಾಂಧಿ. ನಾನು ಜನತಾ ಪಾರ್ಟಿಯಲ್ಲಿ ಇದ್ದೆ. ಹಾರೋಹಳ್ಳಿಯಲ್ಲಿ ವೋಟ್ ಕೇಳೋಕೆ ಹೋಗಿದ್ದೆ. ರಾಜಶೇಖರ ಮೂರ್ತಿ ಊರಿನ ಜನರನ್ನ ಸೇರಿಸಿ ಮಾತಾಡುತ್ತಿದ್ದರು. ನಾನು ಮನೆ ಮನೆಗೆ ಹೋಗಿ ನೋಡಿದ್ರೆ ಇಂದಿರಾಗಾಂಧಿ ಫೋಟೋ ಇತ್ತು. ನಾನು ಆಗ ಕೇಳಿದಾಗ ನಾವು ಎಲ್ಲಾ ಇಂದಿರಾಗಾಂಧಿಗೆ ವೋಟ್ ಹಾಕೋದು ಅಂತ ಹೇಳಿದ್ರು. ಆಗ ನಾನು ರಾಜಶೇಖರ ಅವರಿಗೆ ಇಲ್ಲಿ ವೋಟ್ ಬರೊಲ್ಲ ಅಂತ ಹೇಳಿದ್ದೆ. ಅಷ್ಟರ ಮಟ್ಟಿಗೆ ಆರಾಧ್ಯ ದೈವ ಅಂತ ಪೂಜೆ ಮಾಡುತ್ತಿದ್ದರು. ಇಂತಹ ಪಾಪ್ಯುಲರ್ ಲೀಡರ್ ಅನ್ನು ಇನ್ನೊಬ್ಬರು ದೇಶದಲ್ಲಿ ನೋಡಿಲ್ಲ ಎಂದರು.
ದೇಶದಲ್ಲಿ ಗಾಂಧಿ, ಇಂದಿರಾಗಾಂಧಿ, ರಾಜೀವ್ ಗಾಂಧಿ ಹತ್ಯೆ ಮರೆಯೋಕೆ ಆಗಲ್ಲ. ಇವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಇವರನ್ನ ಉಕ್ಕಿನ ಮಹಿಳೆ ಅಂತ ಕರೆಯುತ್ತಾರೆ. ವಾಜಪೇಯಿ ಅವರು ಸಂಸತ್ ನಲ್ಲಿ ಇವರನ್ನು ದುರ್ಗಿ ಅಂತ ಕರೆದಿದ್ದರು ಎಂದರು. ಇನ್ನು ಬಿಜೆಪಿ ಅವರು ರಾಷ್ಟ್ರ ಪ್ರೇಮದ ಬಗ್ಗೆ ಮಾತಾಡ್ತಾರೆ. ಆದರೆ ಅವರಲ್ಲಿ ಒಬ್ಬರೂ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿಲ್ಲ. ದೇಶಕ್ಕೆ ಬಲಿದಾನ ಮಾಡಿದ್ದು ನೆಹರು ಕುಟುಂಬ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಚೆಲುವರಾಯಸ್ವಾಮಿ, ಮಾಜಿ ಸಚಿವ ರೇವಣ್ಣ, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕ ನರೇಂದ್ರ ಸ್ವಾಮಿ, ರಾಣಿ ಸತೀಶ್, ನಜೀರ್ ಅಹಮದ್ ಸೇರಿ ಹಲವು ನಾಯಕರು ಭಾಗಿಯಾಗಿದ್ದು, ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…