ರಾಜ್ಯ

ಇಂದಿರಾ ಗಾಂಧಿ ದೇಶದ ಬಡವರ ಆರಾಧ್ಯ ದೈವ ಆಗಿದ್ರು : ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದ ಬಡವರ ಆರಾಧ್ಯ ದೈವ ಆಗಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಸಂಸತ್‍ನಲ್ಲಿ ಇವರನ್ನು ದುರ್ಗಿ ಅಂತ ಕರೆದಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ಇಂದಿರಾಗಾಂಧಿ 39ನೇ ಪುಣ್ಯ ಸ್ಮರಣೆಯ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಲಾಲ್ ಬಹಾದ್ದೂರ್ ಶಾಸ್ತ್ರಿ ಸಂಪುಟದಲ್ಲಿ ಮಂತ್ರಿ ಆಗಿದ್ರು. ಲಾಲ್ ಬಹಾದ್ದೂರ್ ಶಾಸ್ತ್ರಿ ನಂತರ ದೇಶದ ಪ್ರಧಾನಿ ಆದರು. ದೇಶದ ಬಡವರ ಆರಾಧ್ಯ ದೈವ ಆಗಿದ್ರು ಇಂದಿರಾಗಾಂಧಿ. ನಾನು ಜನತಾ ಪಾರ್ಟಿಯಲ್ಲಿ ಇದ್ದೆ. ಹಾರೋಹಳ್ಳಿಯಲ್ಲಿ ವೋಟ್ ಕೇಳೋಕೆ ಹೋಗಿದ್ದೆ. ರಾಜಶೇಖರ ಮೂರ್ತಿ ಊರಿನ ಜನರನ್ನ ಸೇರಿಸಿ ಮಾತಾಡುತ್ತಿದ್ದರು. ನಾನು ಮನೆ ಮನೆಗೆ ಹೋಗಿ ನೋಡಿದ್ರೆ ಇಂದಿರಾಗಾಂಧಿ ಫೋಟೋ ಇತ್ತು. ನಾನು ಆಗ ಕೇಳಿದಾಗ ನಾವು ಎಲ್ಲಾ ಇಂದಿರಾಗಾಂಧಿಗೆ ವೋಟ್ ಹಾಕೋದು ಅಂತ ಹೇಳಿದ್ರು. ಆಗ ನಾನು ರಾಜಶೇಖರ ಅವರಿಗೆ ಇಲ್ಲಿ ವೋಟ್ ಬರೊಲ್ಲ ಅಂತ ಹೇಳಿದ್ದೆ. ಅಷ್ಟರ ಮಟ್ಟಿಗೆ ಆರಾಧ್ಯ ದೈವ ಅಂತ ಪೂಜೆ ಮಾಡುತ್ತಿದ್ದರು. ಇಂತಹ ಪಾಪ್ಯುಲರ್ ಲೀಡರ್ ಅನ್ನು ಇನ್ನೊಬ್ಬರು ದೇಶದಲ್ಲಿ ನೋಡಿಲ್ಲ ಎಂದರು.

ದೇಶದಲ್ಲಿ ಗಾಂಧಿ, ಇಂದಿರಾಗಾಂಧಿ, ರಾಜೀವ್ ಗಾಂಧಿ ಹತ್ಯೆ ಮರೆಯೋಕೆ ಆಗಲ್ಲ. ಇವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಇವರನ್ನ ಉಕ್ಕಿನ ಮಹಿಳೆ ಅಂತ ಕರೆಯುತ್ತಾರೆ. ವಾಜಪೇಯಿ ಅವರು ಸಂಸತ್ ನಲ್ಲಿ ಇವರನ್ನು ದುರ್ಗಿ ಅಂತ ಕರೆದಿದ್ದರು ಎಂದರು. ಇನ್ನು ಬಿಜೆಪಿ ಅವರು ರಾಷ್ಟ್ರ ಪ್ರೇಮದ ಬಗ್ಗೆ ಮಾತಾಡ್ತಾರೆ. ಆದರೆ ಅವರಲ್ಲಿ ಒಬ್ಬರೂ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿಲ್ಲ. ದೇಶಕ್ಕೆ ಬಲಿದಾನ ಮಾಡಿದ್ದು ನೆಹರು ಕುಟುಂಬ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಚೆಲುವರಾಯಸ್ವಾಮಿ, ಮಾಜಿ ಸಚಿವ ರೇವಣ್ಣ, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕ ನರೇಂದ್ರ ಸ್ವಾಮಿ, ರಾಣಿ ಸತೀಶ್, ನಜೀರ್ ಅಹಮದ್ ಸೇರಿ ಹಲವು ನಾಯಕರು ಭಾಗಿಯಾಗಿದ್ದು, ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago