ರಾಜ್ಯ

ಬಿಪಿಎಲ್‌ ಕಾರ್ಡ್‌ದಾರರಿಗೆ ಜನವರಿಯಿಂದ ಇಂದಿರಾ ಕಿಟ್:‌ ಸಚಿವ ಮುನಿಯಪ್ಪ

ಬೆಂಗಳೂರು: ಬಿಪಿಎಲ್‌ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿ ಹೆಚ್ಚಾಯಿತು ಎಂಬ ಭಾವನೆ ಇದೆ. ಹಾಗಾಗಿ ಇಂದಿರಾ ಕಿಟ್‌ ಎಂದು ಹೊಸ ಯೋಜನೆ ಜಾರಿ ಮಾಡುತ್ತೇವೆ. ಜನವರಿ, ಫೆಬ್ರವರಿಯಲ್ಲಿ ಬೇಳೆ, ಸಕ್ಕರೆ, ಉಪ್ಪು ವಿತರಣೆ ಮಾಡುತ್ತೇವೆ ಎಂದರು.

ಇದನ್ನೂ ಓದಿ:-ಅಶ್ಲೀಲ ಮೆಸೇಜ್:‌ ಪೊಲೀಸ್‌ ಕಮಿಷನರ್‌ಗೆ ದೂರು ನೀಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ

ಹೊರ ರಾಜ್ಯಗಳಿಗೆ ಪಡಿತರ ಅಕ್ರಮ ಸಾಗಾಟ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ವಿವಿಧೆಡೆ 574 ಜನರನ್ನು ಅರೆಸ್ಟ್‌ ಮಾಡಿದ್ದೇವೆ. ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇನ್ನು ಮುಂದೆ ಹಾಗೆ ನಡೆಯಲ್ಲ ಎಂದು ತಿಳಿಸಿದರು.

ಇನ್ನು ಅರ್ಹರ ಬಿಪಿಎಲ್‌ ಕಾರ್ಡ್‌ ರದ್ದು ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾರ್ಡ್‌ ರದ್ದಾಗಿದ್ದರೇ ತಕ್ಷಣವೇ ತಹಶೀಲ್ದಾರ್‌ಗಳನ್ನು ಭೇಟಿ ಮಾಡಿ ಹಾಕಿದರೆ 15 ದಿನಗಳೊಳಗೆ ಪಡಿತರ ಕಾರ್ಡ್‌ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

4 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

4 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

4 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

4 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

4 hours ago