ರಾಜ್ಯ

ಇಂದಿರಾ ಆಡಳಿತ ವಿಶ್ವಕ್ಕೆ ಮಾದರಿ : ಸಚಿವೆ ಹೆಬ್ಬಾಳ್ಕರ್

ಉಡುಪಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಉಕ್ಕಿನ ಮಹಿಳೆ ಎನ್ನುವ ಬಿರುದಿಗೆ ತಕ್ಕ ಹಾಗೆ ಬದುಕಿ ತೋರಿಸಿದ್ದರು. ಅವರ ವ್ಯಕ್ತಿತ್ವ ಇಡೀ ವಿಶ್ವಕ್ಕೇ ಮಾದರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಇಂದಿರಾ ಗಾಂಧಿ ನನ್ನ ಆದರ್ಶ, ನನ್ನಂತಹ ಲಕ್ಷಾಂತರ ಜನರಿಗೆ ಸ್ಫೂರ್ತಿಯ ಸೆಲೆ ಆಗಿದ್ದಾರೆ ಎಂದರು.

ಇದನ್ನು ಓದಿ: ಸೌಹರ್ದ ಕದಡುವ ಬಿಜೆಪಿ : ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಆರೋಪ

ಇಂದಿರಾ ಗಾಂಧಿಯವರ ರಾಜಕಾರಣ ಕೇವಲ ಮಹಿಳೆಯರಿಗಷ್ಟೇ ಅಲ್ಲದೆ, ಪುರುಷರಿಗೂ ಆದರ್ಶ. ಅವರ ನೇತೃತ್ವದಲ್ಲಿ ಭಾರತವು ಅಂತರಾಷ್ಟ್ರೀಯ ಮಟ್ಟದಲ್ಲಿ ಬಲಿಷ್ಠ ರಾಷ್ಟ್ರವಾಗಿ ಗುರುತಿಸಿಕೊಂಡಿತು. ಇಂದಿರಾಗಾಂಧಿ ದೇಶದ ಸ್ವಾವಲಂಬನೆಗಾಗಿ ಬ್ಯಾಂಕ್ ಗಳ ರಾಷ್ಟ್ರೀಕರಣ, ಹಸಿರು ಕ್ರಾಂತಿ ಸೇರಿದಂತೆ ಅನೇಕ ಆರ್ಥಿಕ ಮತ್ತು ಸಾಂಸ್ಕೃತಿಕ ಸುಧಾರಣೆಗಳನ್ನು ಆರಂಭಿಸಿದರು ಎಂದು ಹೇಳಿದರು. ‌ ಒಂದು ಹೊತ್ತು ಊಟ ಮಾಡಲು ಕಷ್ಟ ಪಡುತ್ತಿದ್ದ ಕಾಲದಲ್ಲಿ ಭಾರತವನ್ನು ಮುನ್ನಡೆಸಿ, ಇಡೀ ವಿಶ್ವಕ್ಕೆ ಮಾದರಿಯಾದರು.

ತ್ಯಾಗ ಬಲಿದಾನಕ್ಕೆ ಹೆಸರಾದ ಮಹಿಳೆ, ಅವರ ಅಡಳಿತ ನಮಗೆ ಸ್ಫೂರ್ತಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸೋಕೆ ಪ್ರತಿಯೊಬ್ಬ ಕಾರ್ಯಕರ್ತನ ಶ್ರಮ ಅಗತ್ಯ. ದೇಶ ಉಳಿಬೇಕು ಎಂದರೆ ಕಾಂಗ್ರೆಸ್ ಪಕ್ಷ ಉಳಿಬೇಕು, ಉಡುಪಿ ಜಿಲ್ಲೆಯಲ್ಲಿ ಐದು ಕ್ಷೇತ್ರಗಳಲ್ಲಿ ಸೋತರೂ ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಬಲಿಷ್ಠವಾಗಿದೆ. ದೇಶದ ಭವಿಷ್ಯ, ಮಕ್ಕಳ ಭವಿಷ್ಯಕ್ಕಾಗಿ ಕಾಂಗ್ರೆಸ್ ಪಕ್ಷ ಅತ್ಯಗತ್ಯ ಎಂದು ಹೇಳಿದರು. ‌

ಇದನ್ನು ಓದಿ: ಸಾಧ‌ಕರನ್ನು ಗುರುತಿಸಿ ಸನ್ಮಾನಿಸುವುದೇ ದೊಡ್ಡ ಸಾಧನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸರ್ದಾರ್ ವಲ್ಲಭಭಾಯಿ ಪಟೇಲ್ ಅದರ್ಶ ಪುರುಷ ಹರಿದು ಹಂಚಿ ಹೋಗಿದ್ದ ಭಾರತವನ್ನು ಒಂದುಗೂಡಿಸಿದ ಖ್ಯಾತಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಸಲ್ಲುತ್ತದೆ. ‌ಅಖಂಡ ಭಾರತ ನಿರ್ಮಾಣದಲ್ಲಿ ಅವರ ಪಾತ್ರ ದೊಡ್ಡದು ಎಂದರು. ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜ್ಯೋತಿ ಹೆಬ್ಬಾರ್, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ರಮೇಶ್ ಕಾಂಚನ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

2 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

4 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

5 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

6 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

9 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

9 hours ago