Information Technology Upgrade: Eskom's online services unavailable for two days
ಬೆಂಗಳೂರು : ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್ ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್ ಲೈನ್ ಆಧರಿತ ಸೇವೆಗಳು ಜುಲೈ 25ರ ರಾತ್ರಿ 8.30 ಗಂಟೆಯಿಂದ ಜುಲೈ 27ರ ರಾತ್ರಿ 10 ಗಂಟೆಯವರೆಗೆ ಲಭ್ಯವಿರುವುದಿಲ್ಲ.
ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳ ಈ ಕೆಳಕಂಡ ನಗರ ಉಪ ವಿಭಾಗದ ಗ್ರಾಹಕರಿಗೆ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಬೆಸ್ಕಾಂ: ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಉಪ ವಿಭಾಗಗಳು, ಶಿಢ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಸಿರಾ, ಚೆನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಗೌರಿಬಿದನೂರು, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು ಮತ್ತು ತಿಪಟೂರು ನಗರ ಉಪ ವಿಭಾಗಗಳ ವ್ಯಾಪ್ತಿಗಳಲ್ಲಿ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ.
ಸೆಸ್ಕ್ : ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ, ಚನ್ನರಾಯಪಟ್ಟಣ.
ಮೆಸ್ಕಾಂ: ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು
ಜೆಸ್ಕಾಂ: ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಗುಲ್ಬರ್ಗ ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್, ಹೊಸಪೇಟೆ
ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಲ್, ದಾಂಡೇಲಿ, ಇಂಡಿ, ಸೌದತ್ತಿ, ಸೇವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು, ವಿಜಾಪುರ.
ಬಿಲ್ ಪಾವತಿಗಾಗಿ ಹೆಚಾಗಿ ಬಳಸುವ ಎಲ್ಲಾ ಎಸ್ಕಾಂಗಳ ಜಾಲತಾಣ, ಬೆಸ್ಕಾಂ ಮಿತ್ರ ಮೊಬೈಲ್ ಆಪ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೌಂಟರ್ ಗಳಲ್ಲಿ ಈ ಎರಡು ದಿನ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ. ಅಡಚಣೆಗಾಗಿ ಗ್ರಾಹಕರು ಸಹಕಾರ ನೀಡಬೇಕೆಂದು ಬೆಸ್ಕಾಂ ಕೋರಿದೆ.
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…
ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್ ಎದುರಾಗಿದ್ದು, ರಾಘವ್ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.…
ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…
ಹಾಸನ: ಜಿಲ್ಲೆಯ ಹೊಳೆನರಸೀಪುರ ವ್ಯಾಪ್ತಿಯಲ್ಲಿ ನಡೆದ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಭಾವುಕರಾಗಿ ಕಣ್ಣೀರು…