ಬೆಂಗಳೂರು: ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣಮ್, ಐಐಎಸ್ಸಿ ಮಾಜಿ ನಿರ್ದೇಶಕ ಬಲರಾಮ್ ಸೇರಿದಂತೆ 18 ಮಂದಿ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೋವಿ ಸಮುದಾಯಕ್ಕೆ ಸೇರಿರುವ ದೂರುದಾರ ದುರ್ಗಪ್ಪ ಎಂಬುವವರು ಭಾರತೀಯ ವಿಜ್ಞಾನ ಸಂಸ್ಥೆಯ ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಅಧ್ಯಾಪಕರಾಗಿದ್ದರು.
ಕಳೆದ 2014ರಲ್ಲಿ ತನ್ನನ್ನು ಹನಿ ಟ್ರ್ಯಾಪ್ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿ ವಜಾ ಮಾಡಲಾಗಿದೆ. ಅಷ್ಟೇ ಅಲ್ಲದೇ ಕ್ರಿಸ್ ಗೋಪಾಲಕೃಷ್ಣನ್ ಸೇರಿದಂತೆ 18 ಮಂದಿ 2008ರಿಂದ 2025ರವರೆಗೆ ಜಾತಿನಿಂದನೆ ದೌರ್ಜನ್ಯ ನಡೆಸುತ್ತಾ ಬಂದಿದ್ದಾರೆ ಎಂದು ದೂರು ನೀಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದನ್ ರಂಗರಾಜನ್, ರಂಗರಾಜನ್ ಶ್ರೀಧರ್ ವಾರಿಯರ್, ಸಂಧ್ಯಾ, ವಿಶ್ವೇಶ್ವರಯ್ಯ, ಮನೋಹರನ್ ಸೇರಿದಂತೆ ಮತ್ತಿತರರನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.
ಇನ್ನು ಕ್ರಿಸ್ ಗೋಪಾಲಕೃಷ್ಣನ್ ಅವರು ಐಎಸ್ಸಿಯ ಟ್ರಸ್ಟಿ ಸದಸ್ಯರಾಗಿರುವ ಕಾರಣ ಅವರ ಮೇಲೂ ಕೇಸ್ ದಾಖಲಾಗಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…