ರಾಜ್ಯ

ಬೆಳಗಾವಿಯಲ್ಲಿ ಅಮಾನವೀಯ ಘಟನೆ : ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ

ಬೆಳಗಾವಿ : ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವಿದ್ಯುತ್‌ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದಿದೆ.
ಸಂತ್ರಸ್ಥ ಮಹಿಳೆಯ ಪುತ್ರ ಪ್ರೀತಿಸಿದ ಯುವತಿಯೊಟ್ಟಿಗೆ ಮನೆ ಬಿಟ್ಟು ಹೋಗಿದ್ದಾನೆ. ಇದರಿಂದ ರೊಚ್ಚಿಗೆದ್ದ ಯುವತಿಯ ಮನೆಯವರು ಆತನ ತಾಯಿಯನ್ನು ಬೆತ್ತಲೆಗೊಳಿಸಿ ವಿದ್ಯುತ್‌ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ಮಾಡಿದ್ದಾರೆ.
ಯುವತಿ ಮನೆ ಬಿಟ್ಟು ಹೋಗಿರುವ ವಿಷಯ ತಿಳಿಯುತ್ತಿದ್ದಂತೆ ಆಕೆಯ ಪೋಷಕರು ರಾತ್ರೋ ರಾತ್ರಿ ಆಕೆ ಪ್ರೀತಿಸಿದ ಯುವಕನ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಮನೆಯ ಬಾಗಿಲು ಮುರಿದು ಒಳಗೆ ಮನೆಯೊಳಗಿದ್ದ ಮಹಿಳೆಯನ್ನು ಬೀದಿಯಲ್ಲಿ ಮೆರವಣಿಗೆ ಮಾಡಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ.
ಸಂತ್ರಸ್ಥ ಮಹಿಳೆಯ ಮಗ ಆದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಇವರ ಪ್ರೀತಿಗೆ ಯುವತಿಯ ಮನೆಯವರ ವಿರೋಧವಿತ್ತು. ಅಷ್ಟೇ ಅಲ್ಲದೇ ಆ ಹುಡುಗಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯವಾಗಿತ್ತು. ಈ ವಿಷಯ ಯುವಕನಿಗೆ ತಿಳಿಯುತ್ತಿದ್ದಂತೆ ಮಧ್ಯರಾತ್ರಿಯೇ ಯುವತಿಯೊಂದಿಗೆ ಪರಾರಿಯಾಗಿದ್ದ. ಇದರಿಂದ ರೊಚ್ಚಿಗೆದ್ದ ಯುವತಿಯ ಕುಟುಂಬಸ್ಥರು ಈ ಅಮಾನವೀಯ ಕೃತ್ಯ ಎಸಗಿದ್ದಾರೆ.
ಹಲ್ಲೆಗೊಳಗಾದ ಮಹಿಳೆಯನ್ನು ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸ್‌ ಆಯುಕ್ತ ಎಸ್.ಎನ್‌ ಸಿದ್ದರಾಮಪ್ಪ ಹಾಗೂ ಡಿಸಿಪಿ ರೋಹನ್‌ ಜಗದೀಶ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗ್ರಾಮದ ಮಾಜಿ ಅಧ್ಯಕ್ಷ ಸೇರಿದಂತೆ ಏಳು ಜನರನ್ನು ವಶಕ್ಕೆ ಪಡೆಯಾಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಸದ್ಯ ಈ ಅಮಾನವೀಯ ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿದೆ.
lokesh

Recent Posts

ಜೋಳದ ಫಸಲು ಕಾಯುವ ವೇಳೆ ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ…

18 mins ago

ಓದುಗರ ಪತ್ರ: ಸ್ವಾಗತಾರ್ಹ ತೀರ್ಪು!

ಅಧಿಕ ಸುಂಕ ಹೇರಿಕೆ ಚಟ ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ ವಿವಿಧ ದೇಶಗಳನು ನಿಯಂತ್ರಿಸಲು! ಆದರೀಗ ರದ್ದುಗೊಳಿಸಿದೆ ಅಮೆರಿಕದ ಸುಪ್ರೀಂ ಕೋರ್ಟ್ ಅಽಕ…

24 mins ago

ಓದುಗರ ಪತ್ರ: ಮಕ್ಕಳಿಗೆ ಮೊಬೈಲ್ ನಿಷೇಧದ ಚಿಂತನೆ: ಸ್ವಾಗತಾರ್ಹ

ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…

30 mins ago

ಓದುಗರ ಪತ್ರ: ಮಕ್ಕಳು ಅಗತ್ಯವಿರುವಷ್ಟೇ ಮೊಬೈಲ್ ಬಳಸಲಿ

ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ…

33 mins ago

ಓದುಗರ ಪತ್ರ: ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಕೈಬಿಡಿ

ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ…

36 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಲಕ್ಷಾಂತರ ತಂಗಿಯರ ಬದುಕನ್ನು ಹೊಲಿಯುವ ‘ಟೈಲರ್ ಅಣ್ಣʼ

ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…

3 hours ago