ರಾಜ್ಯ

ಬೆಳಗಾವಿಯಲ್ಲಿ ಅಮಾನವೀಯ ಘಟನೆ : ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ

ಬೆಳಗಾವಿ : ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವಿದ್ಯುತ್‌ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದಿದೆ.
ಸಂತ್ರಸ್ಥ ಮಹಿಳೆಯ ಪುತ್ರ ಪ್ರೀತಿಸಿದ ಯುವತಿಯೊಟ್ಟಿಗೆ ಮನೆ ಬಿಟ್ಟು ಹೋಗಿದ್ದಾನೆ. ಇದರಿಂದ ರೊಚ್ಚಿಗೆದ್ದ ಯುವತಿಯ ಮನೆಯವರು ಆತನ ತಾಯಿಯನ್ನು ಬೆತ್ತಲೆಗೊಳಿಸಿ ವಿದ್ಯುತ್‌ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ಮಾಡಿದ್ದಾರೆ.
ಯುವತಿ ಮನೆ ಬಿಟ್ಟು ಹೋಗಿರುವ ವಿಷಯ ತಿಳಿಯುತ್ತಿದ್ದಂತೆ ಆಕೆಯ ಪೋಷಕರು ರಾತ್ರೋ ರಾತ್ರಿ ಆಕೆ ಪ್ರೀತಿಸಿದ ಯುವಕನ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಮನೆಯ ಬಾಗಿಲು ಮುರಿದು ಒಳಗೆ ಮನೆಯೊಳಗಿದ್ದ ಮಹಿಳೆಯನ್ನು ಬೀದಿಯಲ್ಲಿ ಮೆರವಣಿಗೆ ಮಾಡಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ.
ಸಂತ್ರಸ್ಥ ಮಹಿಳೆಯ ಮಗ ಆದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಇವರ ಪ್ರೀತಿಗೆ ಯುವತಿಯ ಮನೆಯವರ ವಿರೋಧವಿತ್ತು. ಅಷ್ಟೇ ಅಲ್ಲದೇ ಆ ಹುಡುಗಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯವಾಗಿತ್ತು. ಈ ವಿಷಯ ಯುವಕನಿಗೆ ತಿಳಿಯುತ್ತಿದ್ದಂತೆ ಮಧ್ಯರಾತ್ರಿಯೇ ಯುವತಿಯೊಂದಿಗೆ ಪರಾರಿಯಾಗಿದ್ದ. ಇದರಿಂದ ರೊಚ್ಚಿಗೆದ್ದ ಯುವತಿಯ ಕುಟುಂಬಸ್ಥರು ಈ ಅಮಾನವೀಯ ಕೃತ್ಯ ಎಸಗಿದ್ದಾರೆ.
ಹಲ್ಲೆಗೊಳಗಾದ ಮಹಿಳೆಯನ್ನು ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸ್‌ ಆಯುಕ್ತ ಎಸ್.ಎನ್‌ ಸಿದ್ದರಾಮಪ್ಪ ಹಾಗೂ ಡಿಸಿಪಿ ರೋಹನ್‌ ಜಗದೀಶ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗ್ರಾಮದ ಮಾಜಿ ಅಧ್ಯಕ್ಷ ಸೇರಿದಂತೆ ಏಳು ಜನರನ್ನು ವಶಕ್ಕೆ ಪಡೆಯಾಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಸದ್ಯ ಈ ಅಮಾನವೀಯ ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿದೆ.
lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago