ರಾಜ್ಯ

ಮೈಸೂರು, ಚಾಮರಾಜನಗರ ಜಿಲ್ಲೆಗೆ ವಿನೂತನ ಆ್ಯಂಬುಲೆನ್ಸ್‌ ಸೇವೆ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಮೈಸೂರು, ಚಾಮರಾಜನಗರ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಕಡ್ಡಾಯವಾಗಿ ಎರಡು ಆ್ಯಂಬುಲೆನ್ಸ್‌ಗಳನ್ನು ಒದಗಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಸದಸ್ಯ ಡಾ.ಯತೀಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ವ್ಯಾಪ್ತಿಗೆ ಬರುವ ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಕ್ಕೂ ಆ್ಯಂಬುಲೆನ್ಸ್ ಒದಗಿಸಲು ಸಂಬಂಧಪಟ್ಟವರಿಗೆ ಸೂಚಿಸಿದ್ದೇವೆ. ಅಲ್ಲದೆ ಈ ಎರಡೂ ಜಿಲ್ಲೆಗಳಿಗೆ ಅಡ್ವಾನ್ಸ್ ಲೈಫ್‌ ಸಪೋರ್ಟ್‌ ಎಂಬ ವಿನೂತನ ಹಾಗೂ ಆಧುನಿಕ ಸೌಲಭ್ಯವುಳ್ಳ ಆ್ಯಂಬುಲೆನ್ಸ್‌ಳನ್ನು ಒದಗಿಸುತ್ತೇವೆ ಎಂದರು.

ಈ ಆ್ಯಂಬುಲೆನ್ಸ್‌ಗಳಲ್ಲಿ ಎಲ್ಲಾ ರೀತಿಯ ಸೌಲಭ್ಯಗಳು ಇರಲಿವೆ. ಗಾಯಾಳು ಇಲ್ಲವೇ ಇತರೆ ಯಾವುದಾದರೂ ಕಾಯಿಲೆಯಿಂದ ಬಳಲುತ್ತಿದ್ದರೆ ತಕ್ಷಣವೇ ಚಿಕಿತ್ಸೆ ಕೊಡಿಸಲು ಅನುಕೂಲವಾಗುವಂತೆ ಆ್ಯಂಬುಲೆನ್ಸ್‌ನಲ್ಲಿ ಸೌಲಭ್ಯಗಳನ್ನು ಒದಗಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿಗೆ ಪ್ರತ್ಯೇಕವಾಗಿ ಟ್ರಾಮಾ ಕೇಂದ್ರ ಸ್ಥಾಪನೆ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ನಮ ನಿಯಮಾವಳಿ ಪ್ರಕಾರ ಪ್ರತ್ಯೇಕವಾಗಿ ಇದನ್ನು ಸ್ಥಾಪನೆ ಮಾಡಲು ಅವಕಾಶವಿಲ್ಲ.

ಇರುವ ಕಟ್ಟಡದಲ್ಲೇ ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಿ ನಿರ್ವಹಣೆ ಮಾಡಲು ಸೂಚಿಸಬಹುದು. ಪ್ರತ್ಯೇಕ ಕಟ್ಟಡ ಬೇಕು ಎಂದರೆ ಆರ್ಥಿಕ ಹೊರೆ, ಸಿಬ್ಬಂದಿ ಹೊರೆ ಬೀಳುತ್ತದೆ. ಇರುವ ಕಟ್ಟಡಗಳಲ್ಲೇ ಇದನ್ನು ನಿರ್ವಹಣೆ ಮಾಡಲು ಸೂಚನೆ ನೀಡಲಾಗುವುದು.

ಒಂದು ವೇಳೆ ನಂಜನಗೂಡಿಗೆ ಪ್ರತ್ಯೇಕವಾದ ಟ್ರಾಮಾ ಕೇಂದ್ರ ಬೇಕು ಎಂದರೆ ಅಧಿಕಾರಿಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಲು ಸೂಚಿಸಲಾಗುವುದು ಎಂದು ಹೇಳಿದರು.
ಇದಕ್ಕೂ ಮುನ್ನ ಮಾತನಾಡಿದ ಡಾ.ಯತೀಂದ್ರ, ನಂಜನಗೂಡಿಗೆ ಪ್ರತ್ಯೇಕವಾಗಿ ಟ್ರಾಮಾ ಕೇಂದ್ರ ಸ್ಥಾಪಿಸಬೇಕೆಂದು ಮನವಿ ಮಾಡಿದರು.

ಅಪಘಾತ, ಇಲ್ಲವೇ ಬೇರೆ ಘಟನೆಗಳು ಸಂಭವಿಸಿದರೆ ನಂಜನಗೂಡಿನಿಂದ ಮೈಸೂರಿಗೆ ಹೋಗಲು ದೂರವಾಗುತ್ತದೆ. ಹೀಗಾಗಿ ಪ್ರತ್ಯೇಕ ಟ್ರಾಮಾ ಕೇಂದ್ರ ಸ್ಥಾಪಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ನೆತನ್ಯಾಹು ಬದುಕಿದ್ದಾರೆ, ಹತ್ಯೆ ವದಂತಿ ಸುಳ್ಳು ; ಇಸ್ರೇಲ್‌

ಜೆರುಸಲೆಮ್‌ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರನ್ನು…

4 mins ago

ಕೆರೆ ಅಭಿವೃದ್ಧಿಪಡಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗುವುದು : ಹನೂರು ಶಾಸಕ ಮಂಜುನಾಥ್‌

ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ…

49 mins ago

ಹನೂರು | ಸುಗಮ ಸಂಚಾರಕ್ಕೆ 4.5ಕೋಟಿ ವೆಚ್ಚದಲ್ಲಿ 2 ಸೇತುವೆ ನಿರ್ಮಾಣ

ಹನೂರು : ಮಳೆಗಾಲದ ಸಂದರ್ಭದಲ್ಲಿ ರೈತರು ಹಾಗೂ ನೆರೆಯ ತಮಿಳುನಾಡಿಗೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆ,…

1 hour ago

ರಾಜ್ಯದ 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ : ಇಲ್ಲಿದೆ ಮಾಹಿತಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು…

1 hour ago

ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…

2 hours ago

ಸೌದಿ ಅರೇಬಿಯಾದಲ್ಲಿರುವ ಅಮೇರಿಕಾದ ವಾಯುನೆಲೆಯ ಮೇಲೆ ಇರಾನ್‌ ದಾಳಿ

ಟೆಹರಾನ್:‌ ಯುಎಸ್‌ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್‌ ಖಾರ್ಜ್‌ ವಾಯುನೆಲೆಯ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…

3 hours ago