ಬೆಂಗಳೂರು: ರಾಜ್ಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ಸರಬರಾಜು ಇಲಾಖೆ ಗುಡ್ನ್ಯೂಸ್ ನೀಡಿದ್ದು, ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಆಹಾರದ ಕಿಟ್ ನೀಡಲು ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ 10 ಕೆಜಿ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು. ಅಧಿಕಾರಕ್ಕೆ ಬಂದ ನಂತರ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ನೀಡಿ, ಉಳಿದ 5 ಕೆಜಿ ಅಕ್ಕಿಗೆ ಹಣವನ್ನು ಖಾತೆಗೆ ವರ್ಗಾವಣೆ ಮಾಡುತ್ತಿತ್ತು.
ನಂತರದ ದಿನಗಳಲ್ಲಿ ಅಂದರೆ ಈಗ ಹಣದ ಬದಲಾಗಿ 5 ಕೆಜಿ ಹೆಚ್ಚುವರಿ ಅಕ್ಕಿಯನ್ನೇ ನೀಡುತ್ತಿದೆ. ಇದೀಗ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಆಹಾರದ ಕಿಟ್ ನೀಡಲು ಆಹಾರ ಇಲಾಖೆಯಿಂದ ಪ್ರಸ್ತಾವನೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆಹಾರದ ಕಿಟ್ನಲ್ಲಿ ಸಕ್ಕರೆ, ಉಪ್ಪು, ತೊಗರಿಬೇಳೆ, ಕಾಫಿಪುಡಿ, ಟೀಪುಡಿ, ಅಡುಗೆ ಎಣ್ಣೆ, ಗೋಧಿ ಇರಲಿದ್ದು, ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದರೆ ಮಾತ್ರ ವಿತರಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಜುಲೈ.2ರಂದು ಚಿಕ್ಕಬಳ್ಳಾಪುರ ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಇದಕ್ಕೆ ಸಮ್ಮತಿ ಸಿಕ್ಕಿದರೆ ಸದ್ಯದಲ್ಲೇ ಆಹಾರ ಕಿಟ್ ನೀಡುವ ಯೋಜನೆ ಜಾರಿಗೆ ಬರುವ ಸಾಧ್ಯತೆಯಿದೆ.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…