ಬೆಂಗಳೂರು : ಬಿಜೆಪಿಯವರು ರಾಜಕೀಯವಾಗಿ ಬರ ಅಧ್ಯಯನ ಮಾಡುವ ಬದಲು ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಕೊಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೇಂದ್ರದಿಂದ ಅಧಿಕಾರಿಗಳ ತಂಡ ಬಂದು ರಾಜ್ಯದಲ್ಲಿ ಅಧ್ಯಯನ ನಡೆಸಿದೆ. ನಾವು ಕೂಡ ಅಧ್ಯಯನ ನಡೆಸಿದ್ದೇವೆ. ಕೇಂದ್ರದ ತಂಡ ಈವರೆಗೂ ವರದಿ ನೀಡಿಲ್ಲ ಎಂದು ಹೇಳಿದರು.
ಬಿಜೆಪಿಯವರು ಪದೇ ಪದೇ ಅಧ್ಯಯನ ಮಾಡುತ್ತೇವೆ ಎಂದು ಹೇಳುವ ಬದಲು ಕೇಂದ್ರದ ಬಳಿಗೆ ಹೋಗಿ ರಾಜ್ಯಕ್ಕೆ ಬರ ಪರಿಹಾರ ಕೊಡಿಸಲಿ. ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ 33,700 ಕೋಟಿ ರೂ. ನಷ್ಟವಾಗಿದೆ. 17900 ಕೋಟಿ ರೂ.ಗಳ ಪರಿಹಾರ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಬಿಜೆಪಿಯ 25 ಮಂದಿ ಸಂಸದರಿದ್ದಾರೆ. ಅವರು ಕೇಂದ್ರದ ಮೇಲೆ ಪ್ರಭಾವ ಬೀರಿ ಹಣಕೊಡಿಸಬೇಕು. ಅದರೆ ಹೊರತಾಗಿ ರಾಜಕೀಯ ಕಾರಣಕ್ಕೆ ಬರ ಅಧ್ಯಯನ ಮಾಡುವುದಾದರೆ ನಮ್ಮ ತಕರಾರು ಇಲ್ಲ ಎಂದರು.
ಬರ ಅಧ್ಯಯನ ವೈಜ್ಞಾನಿಕವಾಗಿ ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಟೀಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯನವರು, ಅಧ್ಯಯನ ನಡೆಸಿದ್ದು ಕೇಂದ್ರ ಅಧಿಕಾರಿಗಳ ತಂಡ. ಕೇಂದ್ರದಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ ಎಂದು ಗೊತ್ತಿದೆ. ಕುಮಾರಸ್ವಾಮಿ ಅವರು ವೈಜ್ಞಾನಿಕವಾಗಿ ಅಧ್ಯಯನ ನಡೆದಿಲ್ಲ ಎನ್ನುವುದಾದರೆ ಕೇಂದ್ರ ಸರ್ಕಾರವನ್ನು ಟೀಕೆ ಮಾಡಲಿ ಎಂದು ತಿರುಗೇಟು ನೀಡಿದರು.
ಮಾಜಿ ಸಂಸದ ಡಿ.ಬಿ.ಚಂದ್ರೇಗೌಡ ನಿಧನಕ್ಕೆ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದರು. ಹಿರಿಯ ಹಾಗೂ ಬುದ್ದಿವಂತ ರಾಜಕಾರಣಿಯಾಗಿದ್ದ ಚಂದ್ರೇಗೌಡರು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಇಂದಿರಾಗಾಂಧಿ ಅವರಿಗಾಗಿ ಬಿಟ್ಟುಕೊಟ್ಟಿದ್ದರು. ಆನಂತರ ಜನತಾದಳಕ್ಕೆ ಬಂದರು . ಸ್ಪೀಕರ್ ಮತ್ತು ವಿರೋಧ ಪಕ್ಷದ ನಾಯಕರಾಗಿದ್ದರು. ಮರಳಿ ಕಾಂಗ್ರೆಸ್ ಸೇರಿದ ಚಂದ್ರೇಗೌಡರು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಬಿಜೆಪಿಗೆ ಹೋದ ಬಳಿಕ ಸಂಸದರಾಗಿ ಆಯ್ಕೆಯಾಗಿದ್ದರು.
ಸಾಹಿತ್ಯದ ಬಗ್ಗೆ ಅಪಾರ ತಿಳುವಳಿಕೆಯುಳ್ಳವರಾಗಿದ್ದರು. ಅವರ ನಿಧನದಿಂದಾಗಿ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ನಾಳೆ ಮೂಡಿಗೆರೆಯಲ್ಲಿ ನಡೆಯುವ ಅಂತ್ಯಕ್ರಿಯೆಯಲ್ಲಿ ತಾವು ಭಾಗವಹಿಸುವುದಾಗಿ ತಿಳಿಸಿದರು.
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…