ರಾಜ್ಯ

ಬಿಜೆಪಿಯವರು ಬರ ಅಧ್ಯಯನ ಬದಲು ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಕೊಡಿಸಲಿ: ಸಿಎಂ

ಬೆಂಗಳೂರು : ಬಿಜೆಪಿಯವರು ರಾಜಕೀಯವಾಗಿ ಬರ ಅಧ್ಯಯನ ಮಾಡುವ ಬದಲು ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಕೊಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೇಂದ್ರದಿಂದ ಅಧಿಕಾರಿಗಳ ತಂಡ ಬಂದು ರಾಜ್ಯದಲ್ಲಿ ಅಧ್ಯಯನ ನಡೆಸಿದೆ. ನಾವು ಕೂಡ ಅಧ್ಯಯನ ನಡೆಸಿದ್ದೇವೆ. ಕೇಂದ್ರದ ತಂಡ ಈವರೆಗೂ ವರದಿ ನೀಡಿಲ್ಲ ಎಂದು ಹೇಳಿದರು.

ಬಿಜೆಪಿಯವರು ಪದೇ ಪದೇ ಅಧ್ಯಯನ ಮಾಡುತ್ತೇವೆ ಎಂದು ಹೇಳುವ ಬದಲು ಕೇಂದ್ರದ ಬಳಿಗೆ ಹೋಗಿ ರಾಜ್ಯಕ್ಕೆ ಬರ ಪರಿಹಾರ ಕೊಡಿಸಲಿ. ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ 33,700 ಕೋಟಿ ರೂ. ನಷ್ಟವಾಗಿದೆ. 17900 ಕೋಟಿ ರೂ.ಗಳ ಪರಿಹಾರ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಬಿಜೆಪಿಯ 25 ಮಂದಿ ಸಂಸದರಿದ್ದಾರೆ. ಅವರು ಕೇಂದ್ರದ ಮೇಲೆ ಪ್ರಭಾವ ಬೀರಿ ಹಣಕೊಡಿಸಬೇಕು. ಅದರೆ ಹೊರತಾಗಿ ರಾಜಕೀಯ ಕಾರಣಕ್ಕೆ ಬರ ಅಧ್ಯಯನ ಮಾಡುವುದಾದರೆ ನಮ್ಮ ತಕರಾರು ಇಲ್ಲ ಎಂದರು.

ಬರ ಅಧ್ಯಯನ ವೈಜ್ಞಾನಿಕವಾಗಿ ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಟೀಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯನವರು, ಅಧ್ಯಯನ ನಡೆಸಿದ್ದು ಕೇಂದ್ರ ಅಧಿಕಾರಿಗಳ ತಂಡ. ಕೇಂದ್ರದಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ ಎಂದು ಗೊತ್ತಿದೆ. ಕುಮಾರಸ್ವಾಮಿ ಅವರು ವೈಜ್ಞಾನಿಕವಾಗಿ ಅಧ್ಯಯನ ನಡೆದಿಲ್ಲ ಎನ್ನುವುದಾದರೆ ಕೇಂದ್ರ ಸರ್ಕಾರವನ್ನು ಟೀಕೆ ಮಾಡಲಿ ಎಂದು ತಿರುಗೇಟು ನೀಡಿದರು.

ಮಾಜಿ ಸಂಸದ ಡಿ.ಬಿ.ಚಂದ್ರೇಗೌಡ ನಿಧನಕ್ಕೆ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದರು. ಹಿರಿಯ ಹಾಗೂ ಬುದ್ದಿವಂತ ರಾಜಕಾರಣಿಯಾಗಿದ್ದ ಚಂದ್ರೇಗೌಡರು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಇಂದಿರಾಗಾಂಧಿ ಅವರಿಗಾಗಿ ಬಿಟ್ಟುಕೊಟ್ಟಿದ್ದರು. ಆನಂತರ ಜನತಾದಳಕ್ಕೆ ಬಂದರು . ಸ್ಪೀಕರ್ ಮತ್ತು ವಿರೋಧ ಪಕ್ಷದ ನಾಯಕರಾಗಿದ್ದರು. ಮರಳಿ ಕಾಂಗ್ರೆಸ್ ಸೇರಿದ ಚಂದ್ರೇಗೌಡರು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಬಿಜೆಪಿಗೆ ಹೋದ ಬಳಿಕ ಸಂಸದರಾಗಿ ಆಯ್ಕೆಯಾಗಿದ್ದರು.

ಸಾಹಿತ್ಯದ ಬಗ್ಗೆ ಅಪಾರ ತಿಳುವಳಿಕೆಯುಳ್ಳವರಾಗಿದ್ದರು. ಅವರ ನಿಧನದಿಂದಾಗಿ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ನಾಳೆ ಮೂಡಿಗೆರೆಯಲ್ಲಿ ನಡೆಯುವ ಅಂತ್ಯಕ್ರಿಯೆಯಲ್ಲಿ ತಾವು ಭಾಗವಹಿಸುವುದಾಗಿ ತಿಳಿಸಿದರು.

andolanait

Recent Posts

ಆಷಾಢ ಶುಕ್ರವಾರ : ಪೂರ್ವಸಿದ್ದತೆ ಪರಿಶೀಲಿಸಿದ ಸಚಿವ ಯತೀಂದ್ರ

ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…

10 hours ago

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

18 hours ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

18 hours ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

18 hours ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

18 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

21 hours ago