ರಾಜ್ಯ

ಬೆಳೆಹಾನಿ ಜಂಟಿಸಮೀಕ್ಷೆಗೆ ಸೂಚನೆ, ವರದಿ ನಂತರ ಪರಿಹಾರ ವಿತರಣೆ ಎಂದ ಸಿಎಂ ಸಿದ್ದರಾಮಯ್ಯ

ಕಲಬುರಗಿ: ರಾಜ್ಯದಲ್ಲಿ ಬೆಳೆಹಾನಿಯಾಗಿರುವುದಕ್ಕೆ ಪರಿಹಾರ ನೀಡಲು ಅನುಕೂಲವಾಗುವಂತೆ ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದ್ದು, ವರದಿ ಬಂದ ನಂತರ ಬೆಳೆಪರಿಹಾರವನ್ನು ರೈತರಿಗೆ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ಕುರಿತು ಕಲಬುರಗಿಯಲ್ಲಿ ಮಾತನಾಡಿದ ಅವರು, ಇನ್ನೊಂದು ವಾರದಲ್ಲಿ ಸಮೀಕ್ಷಾ ವರದಿ ಸಲ್ಲಿಕೆಯಾಗುವ ನಿರೀಕ್ಷೆಯಿದ್ದು, ನಂತರ ಬೆಳೆಹಾನಿ ಪರಿಹಾರ ವಿತರಿಸಲಾಗುವುದು. ರಾಜ್ಯದಲ್ಲಿ ಒಟ್ಟಾರೆ ಈ ಬಾರಿ ಅದೃಷ್ಟವಶಾತ್ ವಾಡಿಕೆಗಿಂತ ಶೇ.4ರಷ್ಟು ಮಳೆ ಜಾಸ್ತಿಯಾಗಿದೆ. ಬೀದರ್, ಕಲ್ಬುರ್ಗಿ, ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಬೆಳೆ ಹಾನಿ ಹೆಚ್ಚು ಸಂಭವಿಸಿದ್ದು, ಬೆಳೆ ಪರಿಹಾರ ವಿತರಿಸಲಾಗುವುದು. 2024-25ನೇ ಸಾಲಿನಲ್ಲಿ 656 ಕೋಟಿ ರೂ. ಬೆಳೆ ವಿಮೆ ಪಾವತಿಯಾಗಿದೆ. ಬೆಳೆವಿಮೆ ಮಾಡಿಕೊಳ್ಳದ ರೈತರಿಗೆ ಪರಿಹಾರ ನೀಡುವ ಬಗ್ಗೆ ಪರಿಶೀಲಿಸಿ ತೀರ್ಮಾನಿಸಲಾಗುವುದು ಹಾಗೂ ರೈತರ ಬೇಡಿಕೆಯಂತೆ ಸಾಲಮನ್ನಾ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಇದನ್ನು ಓದಿ: ಕೂಡಲೇ ಅನರ್ಹರ ಬಿಪಿಎಲ್‌ ಕಾರ್ಡ್‌ ರದ್ದು ಮಾಡಿ: ಪ್ರಹ್ಲಾದ್‌ ಜೋಶಿ ಆಗ್ರಹ

ಕಳೆದ ವರ್ಷ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಕೇಂದ್ರಕ್ಕೆ ತಡವಾಗಿ ವರದಿ ನೀಡಲಾಗಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರವಾಹ ಪರಿಸ್ಥಿತಿಯ ವರದಿಯನ್ನು ಕೇಂದ್ರಕ್ಕೆ ಸಕಾಲದಲ್ಲಿಯೇ ನೀಡಲಾಗಿತ್ತು. ಆದರೆ ಕೇಂದ್ರ ಸರ್ಕಾರವೇ ಈ ಬಗ್ಗೆ ನಿಧಾನ ನಿಲುವು ತಾಳಿದ್ದರಿಂದ, ರಾಜ್ಯ ಸರ್ಕಾರವು ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಿ, ಪರಿಹಾರವನ್ನು ಪಡೆದ ಬಗ್ಗೆ ವಿವರಣೆ ನೀಡಿದರು.

ಇನ್ನು ಅನರ್ಹರ ಬಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಪಿಎಲ್ ಕಾರ್ಡ್ ಇರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅನರ್ಹರನ್ನು ಬಿಪಿಎಲ್ ಕಾರ್ಡ್‌ನ ಸೌಲಭ್ಯದಿಂದ ತೆಗೆದುಹಾಕುವಂತೆ ಹಾಗೂ ಅರ್ಹರಿಗೆ ಈ ಸೌಲಭ್ಯವನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

ರಾಜ್ಯಕ್ಕೆ ನೀಡಲಾಗುವ ಎನ್‌ಡಿಆರ್‌ಎಫ್ ಪರಿಹಾರವನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರವನ್ನು ಹಲವು ಬಾರಿ ಕೋರಲಾಗಿದೆ. ಈ ಬಗ್ಗೆ ಕೇಂದ್ರ ವಿತ್ತ ಸಚಿವರನ್ನು ಹಾಗೂ ಕೇಂದ್ರ ಗೃಹ ಸಚಿವರನ್ನು ಖುದ್ದು ಭೇಟಿ ಮಾಡಲಾಗಿದ್ದರೂ, ಇದುವರೆಗೂ ಸರ್ಕಾರದ ಮನವಿಗೆ ಕೇಂದ್ರ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

56 mins ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

58 mins ago

ಓದುಗರ ಪತ್ರ: ನ್ಯಾಯಾಲಯದ ಬಳಿ ಸಿಗ್ನಲ್ ಲೈಟ್ ಅಳವಡಿಸಿ

ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…

60 mins ago

ಓದುಗರ ಪತ್ರ: ನಂದಿ ಭವನ ಮುಂಭಾಗದ ಮೋರಿ ಶುಚಿಗೊಳಿಸಿ

ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ವಾಟ್ಸಾಪ್ ಹೇಳಿಕೆ, ಡೀಪ್ ಫೇಕ್ ಹಾವಳಿ, ಪಾಪರಾಜಿಗಳ ನಿಯಂತ್ರಣದತ್ತ

ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್‌ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…

1 hour ago

ಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಚಿರತೆ ಹಾವಳಿ

ಮಹಾದೇಶ್ ಎಂ.ಗೌಡ ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ…

1 hour ago