ರಾಜ್ಯ

ರೈತನಿಗೆ ಅವಮಾನ ಮಾಡಿದ ಪ್ರಕರಣ: 7 ದಿನ ಜಿ.ಟಿ.ಮಾಲ್‌ ಕ್ಲೋಸ್‌ ಮಾಡಿಸಲು ನಿರ್ಧಾರ

ಬೆಂಗಳೂರು: ಪಂಚೆ ಧರಿಸಿ ಬಂದ ಕಾರಣ ಹೇಳಿ ರೈತನಿಗೆ ಅವಮಾನ ಮಾಡಿದ ಜಿ.ಟಿ.ಮಾಲ್‌ ಅನ್ನು 7 ದಿನಗಳ ಕಾಲ ಮುಚ್ಚಿಸಲು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಸದನದಲ್ಲಿ ಮಾತನಾಡಿದ ಸಚಿವ ಭೈರತಿ ಸುರೇಶ್‌ ಅವರು, ಜಿ.ಟಿ.ಮಾಲ್‌ ವಿಚಾರ ಸಂಬಂಧ ಬಿಬಿಎಂಪಿ ಆಯುಕ್ತರ ಜೊತೆ ಮಾತನಾಡಿದ್ದೇನೆ. ಈ ಬಗ್ಗೆ ಕಾನೂನಿನಲ್ಲಿ ಅವಕಾಶವಿದೆ ಎಂದಿದ್ದಾರೆ. ಹೀಗಾಗಿ 7 ದಿನಗಳ ಕಾಲ ಜಿ.ಟಿ.ಮಾಲ್‌ ಅನ್ನು ಮುಚ್ಚಿಸುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಪಂಚೆ ಧರಿಸಿ ಮಗನ ಜೊತೆ ಬಂದ ರೈತನನ್ನು ಜಿ.ಟಿ.ಮಾಲ್‌ ಸಿಬ್ಬಂದಿ ಒಳಗಡೆ ಬಿಡದೇ ಅವಮಾನಿಸಿದ್ದರು. ಘಟನೆ ನಡೆಯುತ್ತಿದ್ದಂತೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಜಿ.ಟಿ.ಮಾಲ್‌ ಮಾಲೀಕ ಘಟನೆ ಸಂಬಂಧಿಸಿದಂತೆ ಕ್ಷಮೆ ಕೋರಿದ್ದರು. ಇದಲ್ಲದೇ ರೈತ ಫಕೀರಪ್ಪರನ್ನು ಕರೆದು ಸನ್ಮಾನಿಸಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

2 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

2 hours ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

2 hours ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

2 hours ago

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

12 hours ago