ರಾಜ್ಯ

ರೈತನಿಗೆ ಅವಮಾನ ಮಾಡಿದ ಪ್ರಕರಣ: 7 ದಿನ ಜಿ.ಟಿ.ಮಾಲ್‌ ಕ್ಲೋಸ್‌ ಮಾಡಿಸಲು ನಿರ್ಧಾರ

ಬೆಂಗಳೂರು: ಪಂಚೆ ಧರಿಸಿ ಬಂದ ಕಾರಣ ಹೇಳಿ ರೈತನಿಗೆ ಅವಮಾನ ಮಾಡಿದ ಜಿ.ಟಿ.ಮಾಲ್‌ ಅನ್ನು 7 ದಿನಗಳ ಕಾಲ ಮುಚ್ಚಿಸಲು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಸದನದಲ್ಲಿ ಮಾತನಾಡಿದ ಸಚಿವ ಭೈರತಿ ಸುರೇಶ್‌ ಅವರು, ಜಿ.ಟಿ.ಮಾಲ್‌ ವಿಚಾರ ಸಂಬಂಧ ಬಿಬಿಎಂಪಿ ಆಯುಕ್ತರ ಜೊತೆ ಮಾತನಾಡಿದ್ದೇನೆ. ಈ ಬಗ್ಗೆ ಕಾನೂನಿನಲ್ಲಿ ಅವಕಾಶವಿದೆ ಎಂದಿದ್ದಾರೆ. ಹೀಗಾಗಿ 7 ದಿನಗಳ ಕಾಲ ಜಿ.ಟಿ.ಮಾಲ್‌ ಅನ್ನು ಮುಚ್ಚಿಸುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಪಂಚೆ ಧರಿಸಿ ಮಗನ ಜೊತೆ ಬಂದ ರೈತನನ್ನು ಜಿ.ಟಿ.ಮಾಲ್‌ ಸಿಬ್ಬಂದಿ ಒಳಗಡೆ ಬಿಡದೇ ಅವಮಾನಿಸಿದ್ದರು. ಘಟನೆ ನಡೆಯುತ್ತಿದ್ದಂತೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಜಿ.ಟಿ.ಮಾಲ್‌ ಮಾಲೀಕ ಘಟನೆ ಸಂಬಂಧಿಸಿದಂತೆ ಕ್ಷಮೆ ಕೋರಿದ್ದರು. ಇದಲ್ಲದೇ ರೈತ ಫಕೀರಪ್ಪರನ್ನು ಕರೆದು ಸನ್ಮಾನಿಸಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ಬಿಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…

19 mins ago

ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಭಾರೀ ಏರಿಕೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…

1 hour ago

ಇಂದು, ನಾಳೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ನೆತನ್ಯಾಹು 1 ಫೋನ್‌ ಕಾಲ್‌ ಎಲ್ಲವನ್ನೂ ಹಾಳು ಮಾಡಿತು: ಇರಾನ್‌ ಹೊಸ ಬಾಂಬ್‌

ಟೆಹರಾನ್:‌ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್‌ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್‌…

2 hours ago

ಕಾರು-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರ ಸಾವು

ಟಿ.ನರಸೀಪುರ: ಕಾರು ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…

2 hours ago

ಓಂಕಾರ್ ವಲಯದಲ್ಲಿ ಹತೋಟಿಗೆ ಬಾರದ ಒಂಟಿ ಸಲಗದ ಉಪಟಳ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…

3 hours ago