ಬೆಂಗಳೂರು: ಪಂಚೆ ಧರಿಸಿ ಬಂದ ಕಾರಣ ಹೇಳಿ ರೈತನಿಗೆ ಅವಮಾನ ಮಾಡಿದ ಜಿ.ಟಿ.ಮಾಲ್ ಅನ್ನು 7 ದಿನಗಳ ಕಾಲ ಮುಚ್ಚಿಸಲು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಸದನದಲ್ಲಿ ಮಾತನಾಡಿದ ಸಚಿವ ಭೈರತಿ ಸುರೇಶ್ ಅವರು, ಜಿ.ಟಿ.ಮಾಲ್ ವಿಚಾರ ಸಂಬಂಧ ಬಿಬಿಎಂಪಿ ಆಯುಕ್ತರ ಜೊತೆ ಮಾತನಾಡಿದ್ದೇನೆ. ಈ ಬಗ್ಗೆ ಕಾನೂನಿನಲ್ಲಿ ಅವಕಾಶವಿದೆ ಎಂದಿದ್ದಾರೆ. ಹೀಗಾಗಿ 7 ದಿನಗಳ ಕಾಲ ಜಿ.ಟಿ.ಮಾಲ್ ಅನ್ನು ಮುಚ್ಚಿಸುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಪಂಚೆ ಧರಿಸಿ ಮಗನ ಜೊತೆ ಬಂದ ರೈತನನ್ನು ಜಿ.ಟಿ.ಮಾಲ್ ಸಿಬ್ಬಂದಿ ಒಳಗಡೆ ಬಿಡದೇ ಅವಮಾನಿಸಿದ್ದರು. ಘಟನೆ ನಡೆಯುತ್ತಿದ್ದಂತೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಜಿ.ಟಿ.ಮಾಲ್ ಮಾಲೀಕ ಘಟನೆ ಸಂಬಂಧಿಸಿದಂತೆ ಕ್ಷಮೆ ಕೋರಿದ್ದರು. ಇದಲ್ಲದೇ ರೈತ ಫಕೀರಪ್ಪರನ್ನು ಕರೆದು ಸನ್ಮಾನಿಸಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…