Insulting Women is What BJP Leaders Do: Minister Laxmi Hebbalkar's Sharp Attack
ಬೀದರ್ : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೈತಿಕ ಸ್ಥೈರ್ಯ ಕುಗ್ಗಬೇಕು, ಮಹಿಳೆಯರು ಯಾರೂ ಮುಂದೆ ಬರಬಾರದು ಎಂಬುದು ಬಿಜೆಪಿಗರ ಮನಸ್ಥಿತಿ. ಬಿಜೆಪಿಯವರು ತತ್ವ ಸಿದ್ದಾಂತ ಅಂತ ಹೇಳುತ್ತಾರೆ. ಆದರೆ ಈ ರೀತಿ ಮನುಸ್ಮೃತಿಯನ್ನು ಎಲ್ಲಾ ಕಡೆ ಬಿತ್ತನೆ ಮಾಡಲು ಹೊರಟ್ಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ ನಡೆಸಿದರು.
ಬೀದರ್ ನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಹಿಳೆಯರನ್ನು ಅಪಮಾನ ಮಾಡುವುದು ಬಿಜೆಪಿಗರಿಗೆ ಚಾಳಿಯಾಗಿ ಬಿಟ್ಟಿದೆ. ರವಿ ಕುಮಾರ್ ಹೇಳಿಕೆಯಿಂದ ಬಿಜೆಪಿಯವರ ಎಲ್ಲರ ಮನಸ್ಥಿತಿ ಒಂದೇ ರೀತಿ ಇದೆ ಎಂಬಂತಾಗಿದೆ ಎಂದರು.
ಬಿಜೆಪಿಗರು ಪದೆ ಪದೇ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಇದು ಅವರ ಹಾಗೂ ಆ ಪಕ್ಷದ ಮನಸ್ಥಿತಿಯನ್ನು ತೋರುತ್ತದೆ ಎಂದು ಆಕ್ರೋಶ ಹೊರ ಹಾಕಿದರು.
ಕೆಟ್ಟ ಬಾಯಿ, ಹೊಲಸು ಬಾಯಿ ಏನು ಮಾತಾಡಿದರೂ ಜನ ಸಹಿಸುತ್ತಾರೆ, ಕರ್ನಾಟಕ ರಾಜ್ಯದ ಜನ ಅವರನ್ನ ಬದುಕಿಸುತ್ತಾರೆ ಎಂಬ ಭಾವನೆ ಅವರಿಗೆ ಬಂದು ಬಿಟ್ಟಿದೆ. ಇದು ಅತ್ಯಂತ ಖಂಡನೀಯ, ಹೆಣ್ಣು ಮಕ್ಕಳನ್ನ ಅವಮಾನ ಮಾಡಿದರೆ ಖಂಡಿಸುವುದು ನಮ್ಮ ಸಮಾಜದ ಧರ್ಮ ಎಂದರು.
ನಾನು ಪಕ್ಷದ ಶಿಸ್ತಿನ ಸಿಪಾಯಿ
ರಾಜ್ಯದಲ್ಲಿ ಸೆಪ್ಟೆಂಬರ್ ನಲ್ಲಿ ಕ್ರಾಂತಿಯಾಗಲಿದೆ ಎಂಬ ವಿಚಾರ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ನನ್ನ ಕಡೆಯಿಂದ ಯಾವುದೇ ಉತ್ತರ ನಿಮಗೆ ಸಿಗುವುದಿಲ್ಲ. ನಾನು ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ, ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ದ ಎಂದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…