Insulting Women is What BJP Leaders Do: Minister Laxmi Hebbalkar's Sharp Attack
ಬೀದರ್ : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೈತಿಕ ಸ್ಥೈರ್ಯ ಕುಗ್ಗಬೇಕು, ಮಹಿಳೆಯರು ಯಾರೂ ಮುಂದೆ ಬರಬಾರದು ಎಂಬುದು ಬಿಜೆಪಿಗರ ಮನಸ್ಥಿತಿ. ಬಿಜೆಪಿಯವರು ತತ್ವ ಸಿದ್ದಾಂತ ಅಂತ ಹೇಳುತ್ತಾರೆ. ಆದರೆ ಈ ರೀತಿ ಮನುಸ್ಮೃತಿಯನ್ನು ಎಲ್ಲಾ ಕಡೆ ಬಿತ್ತನೆ ಮಾಡಲು ಹೊರಟ್ಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ ನಡೆಸಿದರು.
ಬೀದರ್ ನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಹಿಳೆಯರನ್ನು ಅಪಮಾನ ಮಾಡುವುದು ಬಿಜೆಪಿಗರಿಗೆ ಚಾಳಿಯಾಗಿ ಬಿಟ್ಟಿದೆ. ರವಿ ಕುಮಾರ್ ಹೇಳಿಕೆಯಿಂದ ಬಿಜೆಪಿಯವರ ಎಲ್ಲರ ಮನಸ್ಥಿತಿ ಒಂದೇ ರೀತಿ ಇದೆ ಎಂಬಂತಾಗಿದೆ ಎಂದರು.
ಬಿಜೆಪಿಗರು ಪದೆ ಪದೇ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಇದು ಅವರ ಹಾಗೂ ಆ ಪಕ್ಷದ ಮನಸ್ಥಿತಿಯನ್ನು ತೋರುತ್ತದೆ ಎಂದು ಆಕ್ರೋಶ ಹೊರ ಹಾಕಿದರು.
ಕೆಟ್ಟ ಬಾಯಿ, ಹೊಲಸು ಬಾಯಿ ಏನು ಮಾತಾಡಿದರೂ ಜನ ಸಹಿಸುತ್ತಾರೆ, ಕರ್ನಾಟಕ ರಾಜ್ಯದ ಜನ ಅವರನ್ನ ಬದುಕಿಸುತ್ತಾರೆ ಎಂಬ ಭಾವನೆ ಅವರಿಗೆ ಬಂದು ಬಿಟ್ಟಿದೆ. ಇದು ಅತ್ಯಂತ ಖಂಡನೀಯ, ಹೆಣ್ಣು ಮಕ್ಕಳನ್ನ ಅವಮಾನ ಮಾಡಿದರೆ ಖಂಡಿಸುವುದು ನಮ್ಮ ಸಮಾಜದ ಧರ್ಮ ಎಂದರು.
ನಾನು ಪಕ್ಷದ ಶಿಸ್ತಿನ ಸಿಪಾಯಿ
ರಾಜ್ಯದಲ್ಲಿ ಸೆಪ್ಟೆಂಬರ್ ನಲ್ಲಿ ಕ್ರಾಂತಿಯಾಗಲಿದೆ ಎಂಬ ವಿಚಾರ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ನನ್ನ ಕಡೆಯಿಂದ ಯಾವುದೇ ಉತ್ತರ ನಿಮಗೆ ಸಿಗುವುದಿಲ್ಲ. ನಾನು ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ, ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ದ ಎಂದರು.
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…