ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ ಸ್ವಾರಸ್ಯಕರವಾಗಿತ್ತು.
ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಕಲಾಪ ಶುರುವಾಗುವ ಮುನ್ನ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ಕಚೇರಿಗೆ ಆಗಮಿಸಿ ಕಾರ್ಯ ಕಲಾಪಗಳ ಬಗ್ಗೆ ಸಮಾಲೋಚನೆ ನಡೆಸಿದ್ದರು. ಅಲ್ಲಿಂದ ನಿರ್ಗಮಿಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎದುರಾದರು.
ಈ ವೇಳೆ ಮುಖ್ಯಮಂತ್ರಿ ಅವರು ಆರ್.ಅಶೋಕ್ ಅವರನ್ನು ಕಂಡು ಆತ್ಮಿಯವಾಗಿ ಏನಯ್ಯ ಸಣ್ಣಗಾಗಿದ್ದಿಯಾ? ಎಂದು ಕೇಳಿದರು. ಇದಕ್ಕೆ ಲಘು ಹಾಸ್ಯ ದಾಟಿಯಲ್ಲಿ ಉತ್ತರಿಸಿದ ಆರ್.ಅಶೋಕ್, ನಾಟಿ ಕೋಳಿ ತಿನ್ನುವುದನ್ನು ಬಿಟ್ಟಿದ್ದೀನಿ ಸರ್ ಎಂದಿದ್ದಾರೆ. ಹಾಗೆಲ್ಲಾ ಬಿಡಬಾರದು ಸಮಯ ಸಿಕ್ಕಾಗ ನಾಟಿ ಕೋಳಿ ತಿನ್ನಬೇಕು ಎಂದು ಸಿದ್ದರಾಮಯ್ಯ ಸಾಮಾನ್ಯ ಸ್ಥಿತಿಯಲ್ಲೇ ಹೇಳಿದ್ದಾರೆ. ಇದಕ್ಕೆ ಅಕ್ಕಪಕ್ಕದಲ್ಲೇ ಇದ್ದ ಬಿಜೆಪಿಯ ವಿ.ಸುನಿಲ್ ಕುಮಾರ್, ಕಾಂಗ್ರೆಸ್ಸಿನ ಪಿ.ಎಂ.ಅಶೋಕ್ ನಕ್ಕು ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…