ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ ಸ್ವಾರಸ್ಯಕರವಾಗಿತ್ತು.
ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಕಲಾಪ ಶುರುವಾಗುವ ಮುನ್ನ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ಕಚೇರಿಗೆ ಆಗಮಿಸಿ ಕಾರ್ಯ ಕಲಾಪಗಳ ಬಗ್ಗೆ ಸಮಾಲೋಚನೆ ನಡೆಸಿದ್ದರು. ಅಲ್ಲಿಂದ ನಿರ್ಗಮಿಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎದುರಾದರು.
ಈ ವೇಳೆ ಮುಖ್ಯಮಂತ್ರಿ ಅವರು ಆರ್.ಅಶೋಕ್ ಅವರನ್ನು ಕಂಡು ಆತ್ಮಿಯವಾಗಿ ಏನಯ್ಯ ಸಣ್ಣಗಾಗಿದ್ದಿಯಾ? ಎಂದು ಕೇಳಿದರು. ಇದಕ್ಕೆ ಲಘು ಹಾಸ್ಯ ದಾಟಿಯಲ್ಲಿ ಉತ್ತರಿಸಿದ ಆರ್.ಅಶೋಕ್, ನಾಟಿ ಕೋಳಿ ತಿನ್ನುವುದನ್ನು ಬಿಟ್ಟಿದ್ದೀನಿ ಸರ್ ಎಂದಿದ್ದಾರೆ. ಹಾಗೆಲ್ಲಾ ಬಿಡಬಾರದು ಸಮಯ ಸಿಕ್ಕಾಗ ನಾಟಿ ಕೋಳಿ ತಿನ್ನಬೇಕು ಎಂದು ಸಿದ್ದರಾಮಯ್ಯ ಸಾಮಾನ್ಯ ಸ್ಥಿತಿಯಲ್ಲೇ ಹೇಳಿದ್ದಾರೆ. ಇದಕ್ಕೆ ಅಕ್ಕಪಕ್ಕದಲ್ಲೇ ಇದ್ದ ಬಿಜೆಪಿಯ ವಿ.ಸುನಿಲ್ ಕುಮಾರ್, ಕಾಂಗ್ರೆಸ್ಸಿನ ಪಿ.ಎಂ.ಅಶೋಕ್ ನಕ್ಕು ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…