ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ ಸ್ವಾರಸ್ಯಕರವಾಗಿತ್ತು.
ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಕಲಾಪ ಶುರುವಾಗುವ ಮುನ್ನ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ಕಚೇರಿಗೆ ಆಗಮಿಸಿ ಕಾರ್ಯ ಕಲಾಪಗಳ ಬಗ್ಗೆ ಸಮಾಲೋಚನೆ ನಡೆಸಿದ್ದರು. ಅಲ್ಲಿಂದ ನಿರ್ಗಮಿಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎದುರಾದರು.
ಈ ವೇಳೆ ಮುಖ್ಯಮಂತ್ರಿ ಅವರು ಆರ್.ಅಶೋಕ್ ಅವರನ್ನು ಕಂಡು ಆತ್ಮಿಯವಾಗಿ ಏನಯ್ಯ ಸಣ್ಣಗಾಗಿದ್ದಿಯಾ? ಎಂದು ಕೇಳಿದರು. ಇದಕ್ಕೆ ಲಘು ಹಾಸ್ಯ ದಾಟಿಯಲ್ಲಿ ಉತ್ತರಿಸಿದ ಆರ್.ಅಶೋಕ್, ನಾಟಿ ಕೋಳಿ ತಿನ್ನುವುದನ್ನು ಬಿಟ್ಟಿದ್ದೀನಿ ಸರ್ ಎಂದಿದ್ದಾರೆ. ಹಾಗೆಲ್ಲಾ ಬಿಡಬಾರದು ಸಮಯ ಸಿಕ್ಕಾಗ ನಾಟಿ ಕೋಳಿ ತಿನ್ನಬೇಕು ಎಂದು ಸಿದ್ದರಾಮಯ್ಯ ಸಾಮಾನ್ಯ ಸ್ಥಿತಿಯಲ್ಲೇ ಹೇಳಿದ್ದಾರೆ. ಇದಕ್ಕೆ ಅಕ್ಕಪಕ್ಕದಲ್ಲೇ ಇದ್ದ ಬಿಜೆಪಿಯ ವಿ.ಸುನಿಲ್ ಕುಮಾರ್, ಕಾಂಗ್ರೆಸ್ಸಿನ ಪಿ.ಎಂ.ಅಶೋಕ್ ನಕ್ಕು ಪ್ರತಿಕ್ರಿಯಿಸಿದ್ದಾರೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…