ರಾಜ್ಯ

ಒಳಮೀಸಲಾತಿ: ನ್ಯಾ. ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ

ಬೆಂಗಳೂರು: ಒಳಮೀಸಲಾತಿ ಕಲ್ಪಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ರವರ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿರುವುದಾಗಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು.

ಇಂದು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಕುರಿತು ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಸಚಿವರ ಹೆಚ್.ಸಿ. ಮಹಾದೇವಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ ಪಾಟೀಲ್ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ನಾಲ್ಕು ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ. ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು. ಆಧುನಿಕ ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿವಸಗಳೊಳಗೆ ಹೊಸ ಸಮೀಕ್ಷೆಯನ್ನು ನಡೆಸಬಹುದೆಂದು ತಜ್ಞರು ಅಭಿಪ್ರಾಯ ಪಡುತ್ತಾರೆ. ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿ ಸಿದ್ದಪಡಿಸಬೇಕು. ಸಮೀಕ್ಷೆಗೆ ಅಗತ್ಯವಿರುವ ತರಬೇತಿ, ಸಂಪನ್ಮೂಲ ಕ್ರೋಢೀಕರಣಗಳ ಉಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿ ರಚಿಸುವುದು ಸೂಕ್ತವೆಂದು ಆಯೋಗವು ಅಭಿಪ್ರಾಯಪಟ್ಟಿದೆ. ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ಈ ವರದಿಯಲ್ಲಿ ತಿಳಿಯಪಡಿಸಿರುವ ಮಾನದಂಡಗಳಂತೆ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವರ್ಗೀಕರಣಗೊಳಿಸಿ ಲಭ್ಯವಿರುವ ಮೀಸಲಾತಿ ಪ್ರಮಾಣವನ್ನು ಆದ್ಯತೆ ಮೇಲೆ ಹಂಚಿಕೆ ಮಾಡಬೇಕು ಎಂದು ಸಮಿತಿ ಶಿಫಾರಸ್ಸು ಮಾಡಿರುವ ಬಗ್ಗೆ ಸಚಿವರು ವಿವರಿಸಿದರು.

ನಾಗಮೋಹನ್ ದಾಸ್ ಆಯೋಗದವರ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಇಂದು ಅಂಗೀಕರಿಸಿದೆ. ಸಮೀಕ್ಷಾ ಕಾರ್ಯವನ್ನು 60 ದಿನದೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಅನುಕೂಲವಾಗುವಂತೆ  ಅವಧಿಯನ್ನು ಎರಡು ತಿಂಗಳವೆರೆಗೆ ವಿಸ್ತರಿಸಲಾಗಿದೆ ಎಂದು  ತಿಳಿಸಿದರು.

ಸಮಿತಿಯ ಶಿಫಾರಸ್ಸುಗಳ ವಿಷಯಗಳ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ 6,000 ಪಂಚಾಯತಿ ಹಾಗೂ 300 ಕ್ಕೂ ಹೆಚ್ಚು ವಾರ್ಡ್‌ಗಳಿವೆ. ಈ ಕಾರ್ಯವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಉಸ್ತುವಾರಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ತೀವ್ರಗತಿಯಲ್ಲಿ ಕೈಗೊಳ್ಳಲು ಸಚಿವ ಸಂಪುಟ ಸೂಚನೆ ನೀಡಿದೆ. ಮುಂದೆ ಯಾವುದೇ ಗೊಂದಲಗಳಾಗದಂತೆ ದತ್ತಾಂಶಗಳು ಕರಾರುವಕ್ಕಾಗಿ ಪಡೆಯಲು ಹಾಗೂ ಜನರಿಗೆ ಮೀಸಲಾತಿಯ ಅನುಕೂಲ ಕಲ್ಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ಸಚಿವರು ತಿಳಿಸಿದರು.

ಹಿಂದೆ ನಡೆಸಿರುವ  ಜಾತಿಗಣತಿ ವರದಿಯಲ್ಲಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ, ಎಸ್‌ಸಿ ವರ್ಗಗಳ ಮಾಹಿತಿಗಳು ವರದಿಯಲ್ಲಿ ಇರುವುದಿಲ್ಲ. ಈ ದತ್ತಾಂಶಗಳಿಲ್ಲದೇ ಹೋದರೆ ಕಾನೂನಿನಡಿ ಮಾನ್ಯವಾಗಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಎರಡು ತಿಂಗಳ ಕಾಲಾವಧಿಯಲ್ಲಿ ಹೊಸ ಸಮೀಕ್ಷೆ ಮಾಡಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ವಿವರಿಸಿದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

5 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago