ಬೆಂಗಳೂರು : ಪರಿಶಿಷ್ಟ ಸಮುದಾಯಕ್ಕೆ ಒಳ ಮೀಸಲಾತಿಯ ಭಾಗ್ಯ ನೀಡಿದ್ದ ಸಿದ್ದರಾಮಯ್ಯ ಸರ್ಕಾರ, ಇದೀಗ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ. ಪರಿಶಿಷ್ಟ ಒಳಮೀಸಲಾತಿ ಜಾರಿ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಹೊರಬಿದ್ದಿದೆ. ಇದರ ಅನ್ವಯ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಸೂಚನೆ ನೀಡಿದೆ.
ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಮೀಸಲಾತಿ ಹಂಚಿಕೆ ಮಾಡಿ ಸರ್ಕಾರ ಆದೇಶಿಸಿದ್ದು, ಇದೀಗ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಪರಿಶಿಷ್ಟ ಜಾತಿಯ ಎಡಗೈ ಸಮುದಾಯಕ್ಕೆ ಶೇಕಡಾ 6, ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಶೇಕಡಾ 6 ಮತ್ತು ಸ್ಪೃಶ್ಯ ಹಾಗೂ ಅಲೆಮಾರಿ ಸಮುದಾಯಕ್ಕೆ ಶೇಕಡಾ 5ರಷ್ಟು ಮೀಸಲಾತಿ ಹಂಚಿಕೆ ಮಾಡಿದ್ದು, ಇದರ ಅನ್ವಯ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಆದೇಶ ನೀಡಿದೆ.
ಯಾರಿಗೆ ಎಷ್ಟು ಮೀಸಲಾತಿ?
ಎಡಗೈಗೆ 6%, ಬಲಗೈಗೆ 6%, ಲಂಬಾಣಿ, ಭೋವಿ ಕೊರಚ ಕೊರಮ, ಅಲೆಮಾರಿ ಸೇರಿದಂತೆ ಇತರೆ ಉಪಪಂಗಡಗಳಿಗೆ 5% ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ಈ ಹಿಂದೆ ಎಡಗೈಗೆ 6%, ಬಲಗೈಗೆ 5%, ಲಂಬಾಣಿ ಭೋವಿ ಸಮುದಾಯಕ್ಕೆ 4%, ಅಲೆಮಾರಿಗಳಿಗೆ 1%, ಆದಿ ಕರ್ನಾಟಕ, ಅದಿ ದ್ರಾವಿಡ ಸಮುದಾಯಗಳಿಗೆ 1% ಮೀಸಲಾತಿಗೆ ನಾಗಮೋಹನ್ ದಾಸ್ ಆಯೋಗ ಶಿಫಾರಸ್ಸು ಮಾಡಿತ್ತು.
ಎಡಗೈ, ಬಲಗೈ ಸಮುದಾಯದ ಮನವೊಲಿಸಿದ ಸಿಎಂ
ಅಲೆಮಾರಿ, ಆದಿ ಕರ್ನಾಟಕ, ಆದಿ ದ್ರಾವಿಡ ಪಂಗಡಗಳ ಮೀಸಲಾತಿ ನಮಗೆ ಕೊಡಿ ಎಂದು ಬಲಗೈ, ಲಂಬಾಣಿ ಭೋವಿ ಸಮಾಜ ಒತ್ತಾಯಿಸಿದ್ದವು. ಅಂತಿಮವಾಗಿ ಐದು ಪ್ರವರ್ಗಗಳ ಬದಲು ಮೂರು ಪ್ರವರ್ಗಗಳನ್ನಾಗಿ ವಿಂಗಡಿಸಿ ಮೀಸಲಾತಿ ಹಂಚಿಕೆ ಮಾಡಲಾಗಿತ್ತು. ಈ ಪ್ರಕಾರ ಎಡಗೈ, ಬಲಗೈ ಸಮುದಾಯಗಳಿಗೆ ತಲಾ 6% ಮೀಸಲಾತಿ ಹಂಚಿಕೆ ಮಾಡಲು ಸರ್ಕಾರ ತೀರ್ಮಾನ ಮಾಡಿತ್ತು. ಈ ಮೂಲಕ ಎರಡೂ ಸಮುದಾಯಗಳ ಸಮಾಧಾನ ಪಡಿಸಿ ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದರು.
ಜಮ್ಮು : ರಾಷ್ಟ್ರೀಯ ಸಮ್ಮೇಳನ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಫಾರುಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ…
ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು…
ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…
ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…
ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…
ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…