ರಾಜ್ಯ

ಒಳ ಮೀಸಲಾತಿ | ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಆದೇಶ

ಬೆಂಗಳೂರು : ಪರಿಶಿಷ್ಟ ಸಮುದಾಯಕ್ಕೆ ಒಳ ಮೀಸಲಾತಿಯ ಭಾಗ್ಯ ನೀಡಿದ್ದ ಸಿದ್ದರಾಮಯ್ಯ ಸರ್ಕಾರ, ಇದೀಗ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ. ಪರಿಶಿಷ್ಟ ಒಳಮೀಸಲಾತಿ ಜಾರಿ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಹೊರಬಿದ್ದಿದೆ. ಇದರ ಅನ್ವಯ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಸೂಚನೆ ನೀಡಿದೆ.

ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಮೀಸಲಾತಿ ಹಂಚಿಕೆ ಮಾಡಿ ಸರ್ಕಾರ ಆದೇಶಿಸಿದ್ದು, ಇದೀಗ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಪರಿಶಿಷ್ಟ ಜಾತಿಯ ಎಡಗೈ ಸಮುದಾಯಕ್ಕೆ ಶೇಕಡಾ 6, ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಶೇಕಡಾ 6 ಮತ್ತು ಸ್ಪೃಶ್ಯ ಹಾಗೂ ಅಲೆಮಾರಿ ಸಮುದಾಯಕ್ಕೆ ಶೇಕಡಾ 5ರಷ್ಟು ಮೀಸಲಾತಿ ಹಂಚಿಕೆ ಮಾಡಿದ್ದು, ಇದರ ಅನ್ವಯ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಆದೇಶ ನೀಡಿದೆ.

ಯಾರಿಗೆ ಎಷ್ಟು ಮೀಸಲಾತಿ?
ಎಡಗೈಗೆ 6%, ಬಲಗೈಗೆ 6%, ಲಂಬಾಣಿ, ಭೋವಿ ಕೊರಚ ಕೊರಮ, ಅಲೆಮಾರಿ ಸೇರಿದಂತೆ ಇತರೆ ಉಪಪಂಗಡಗಳಿಗೆ 5% ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ಈ ಹಿಂದೆ ಎಡಗೈಗೆ 6%, ಬಲಗೈಗೆ 5%, ಲಂಬಾಣಿ ಭೋವಿ ಸಮುದಾಯಕ್ಕೆ 4%, ಅಲೆಮಾರಿಗಳಿಗೆ 1%, ಆದಿ ಕರ್ನಾಟಕ, ಅದಿ ದ್ರಾವಿಡ ಸಮುದಾಯಗಳಿಗೆ 1% ಮೀಸಲಾತಿಗೆ ನಾಗಮೋಹನ್ ದಾಸ್ ಆಯೋಗ ಶಿಫಾರಸ್ಸು ಮಾಡಿತ್ತು.

ಎಡಗೈ, ಬಲಗೈ ಸಮುದಾಯದ ಮನವೊಲಿಸಿದ ಸಿಎಂ
ಅಲೆಮಾರಿ, ಆದಿ ಕರ್ನಾಟಕ, ಆದಿ ದ್ರಾವಿಡ ಪಂಗಡಗಳ ಮೀಸಲಾತಿ ನಮಗೆ ಕೊಡಿ ಎಂದು ಬಲಗೈ, ಲಂಬಾಣಿ ಭೋವಿ ಸಮಾಜ ಒತ್ತಾಯಿಸಿದ್ದವು. ಅಂತಿಮವಾಗಿ ಐದು ಪ್ರವರ್ಗಗಳ‌ ಬದಲು ಮೂರು ಪ್ರವರ್ಗಗಳನ್ನಾಗಿ ವಿಂಗಡಿಸಿ ಮೀಸಲಾತಿ ಹಂಚಿಕೆ ಮಾಡಲಾಗಿತ್ತು. ಈ ಪ್ರಕಾರ ಎಡಗೈ, ಬಲಗೈ ಸಮುದಾಯಗಳಿಗೆ ತಲಾ 6% ಮೀಸಲಾತಿ ಹಂಚಿಕೆ‌ ಮಾಡಲು ಸರ್ಕಾರ ತೀರ್ಮಾನ ಮಾಡಿತ್ತು. ಈ ಮೂಲಕ ಎರಡೂ ಸಮುದಾಯಗಳ ಸಮಾಧಾನ ಪಡಿಸಿ ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದರು.

ಆಂದೋಲನ ಡೆಸ್ಕ್

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

2 mins ago

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್‌ ಖಂಡ್ರೆ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…

24 mins ago

ಜಂಟಿ ಅಧಿವೇಶನದಲ್ಲಿ ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜನವರಿ.22ರಿಂದ ಜನವರಿ.31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

37 mins ago

ಲಕ್ಕುಂಡಿ ಗ್ರಾಮದಲ್ಲಿ ಬಗೆದಷ್ಟು ಪತ್ತೆಯಾಗುತ್ತಿವೆ ಪುರಾತನ ವಸ್ತುಗಳು

ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ…

47 mins ago

ಹನೂರು| ಕಾಡಾನೆ ದಾಳಿಗೆ ಬೆಳೆ ನಾಶ: ಆತ್ಮಹತ್ಯೆ ಎಚ್ಚರಿಕೆ ನೀಡಿದ ಅನ್ನದಾತ

ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…

1 hour ago

ಬ್ಯಾಡ್ಮಿಂಟನ್‌ ಅಂಗಳಕ್ಕೆ ಸೈನಾ ನೆಹ್ವಾಲ್‌ ವಿದಾಯ

ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…

2 hours ago