cm siddaramaiah
ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತಂತೆ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಹಾಗೂ ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಪರಿಶಿಷ್ಟ ಜಾತಿಗಳ ಒಳಮೀಸಲಾತಿ- ಸರ್ಕಾರದ ತೀರ್ಮಾನ ಕುರಿತಂತೆ ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಬುಧವಾರ ಹೇಳಿಕೆ ನೀಡಿ, ಸಮಾನತೆಯ ತತ್ವಕ್ಕೆ ಯಾವುದೇ ಚ್ಯುತಿ ಬಾರದಂತೆ ಅದರ ಮೂಲ ಆಶಯವನ್ನು ಸದೃಢಗೊಳಿಸುವ ದೃಷ್ಟಿಯಿಂದ ಒಳ ಮೀಸಲಾತಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
ನಿವೃತ್ತ ನ್ಯಾಯಮೂರ್ತಿ .ಎನ್. ನಾಗಮೋಹನ ದಾಸ್ ಅವರ ಆಯೋಗವು ರಾಜ್ಯದ ೧೦೧ ಪರಿಶಿಷ್ಟ ಜಾತಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ಸಲ್ಲಿಸಿದ್ದ ಶಿಫಾರಸುಗಳನ್ನು ಮಂಗಳವಾರ (ಆ.೧೯) ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಾರ್ಪಾಟುಗಳೊಂದಿಗೆ ಅಂಗೀಕರಿಸಿದ್ದೇವೆ ಎಂದು ತಿಳಿಸಿದರು.
ಎಡಗೈ ಸಂಬ೦ಧಿತ ಜಾತಿಗಳೆಂದು ಆಯೋಗವು ಗುರುತಿಸಿರುವ ಸಮುದಾಯಗಳಿಗೆ ಶೇ.೬ರಷ್ಟು ಒಳಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ. ಆಯೋಗವು ಪರಯ, ಮೊಗೇರ ಮುಂತಾದ ಬಲಗೈ ಸಂಬ೦ಧಿತ ಜಾತಿಗಳನ್ನು ಎಡಗೈ ಸಂಬ೦ಧಿತ ಜಾತಿಗಳ ಜೊತೆ ಸೇರಿಸಲಾಗಿದೆ ಎಂಬುದನ್ನು ಗಮನಿಸಿದ ಸಚಿವ ಸಂಪುಟವು ಈ ಜಾತಿಗಳನ್ನು ಬಲಗೈ ಸಂಬ೦ಧಿತ ಜಾತಿಗಳ ಜೊತೆ ಸೇರಿಸಿ ಬಲಗೈ ಸಂಬ೦ಧಿತ ಜಾತಿಗಳ ಸಮೂಹಕ್ಕೆ ಶೇ.೬ ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನಿಸಿತು ಎಂದು ಸದನದಲ್ಲಿ ವಿವರಿಸಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…