ರಾಜ್ಯ

ಒಳ ಮೀಸಲಾತಿ ಆದೇಶ | ನೇಮಕಾತಿ ಪ್ರಕ್ರಿಯೆ ಬಗ್ಗೆ ಗ್ರೀನ್‌ ಸಿಗ್ನಲ್‌ ಕೊಟ್ಟ ಸಿಎಂ

ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತಂತೆ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಹಾಗೂ ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ- ಸರ್ಕಾರದ ತೀರ್ಮಾನ ಕುರಿತಂತೆ ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಬುಧವಾರ ಹೇಳಿಕೆ ನೀಡಿ, ಸಮಾನತೆಯ ತತ್ವಕ್ಕೆ ಯಾವುದೇ ಚ್ಯುತಿ ಬಾರದಂತೆ ಅದರ ಮೂಲ ಆಶಯವನ್ನು ಸದೃಢಗೊಳಿಸುವ ದೃಷ್ಟಿಯಿಂದ ಒಳ ಮೀಸಲಾತಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ನಿವೃತ್ತ ನ್ಯಾಯಮೂರ್ತಿ .ಎನ್. ನಾಗಮೋಹನ ದಾಸ್ ಅವರ ಆಯೋಗವು ರಾಜ್ಯದ ೧೦೧ ಪರಿಶಿಷ್ಟ ಜಾತಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ಸಲ್ಲಿಸಿದ್ದ ಶಿಫಾರಸುಗಳನ್ನು ಮಂಗಳವಾರ (ಆ.೧೯) ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಾರ್ಪಾಟುಗಳೊಂದಿಗೆ ಅಂಗೀಕರಿಸಿದ್ದೇವೆ ಎಂದು ತಿಳಿಸಿದರು.

ಎಡಗೈ ಸಂಬ೦ಧಿತ ಜಾತಿಗಳೆಂದು ಆಯೋಗವು ಗುರುತಿಸಿರುವ ಸಮುದಾಯಗಳಿಗೆ ಶೇ.೬ರಷ್ಟು ಒಳಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ. ಆಯೋಗವು ಪರಯ, ಮೊಗೇರ ಮುಂತಾದ ಬಲಗೈ ಸಂಬ೦ಧಿತ ಜಾತಿಗಳನ್ನು ಎಡಗೈ ಸಂಬ೦ಧಿತ ಜಾತಿಗಳ ಜೊತೆ ಸೇರಿಸಲಾಗಿದೆ ಎಂಬುದನ್ನು ಗಮನಿಸಿದ ಸಚಿವ ಸಂಪುಟವು ಈ ಜಾತಿಗಳನ್ನು ಬಲಗೈ ಸಂಬ೦ಧಿತ ಜಾತಿಗಳ ಜೊತೆ ಸೇರಿಸಿ ಬಲಗೈ ಸಂಬ೦ಧಿತ ಜಾತಿಗಳ ಸಮೂಹಕ್ಕೆ ಶೇ.೬ ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನಿಸಿತು ಎಂದು ಸದನದಲ್ಲಿ ವಿವರಿಸಿದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

7 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

9 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

10 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

12 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

17 hours ago