ರಾಜ್ಯ

ಒಳ ಮೀಸಲಾತಿ | ವಾರದೊಳಗೆ ಮಧ್ಯಂತರ ವರದಿ ಸಲ್ಲಿಕೆ

ಬೆಂಗಳೂರು : ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಯವರು ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.

ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ನಡೆದ ಸಭೆ ಬಳಿಕ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಇದನ್ನು ಹೇಳಿದ್ದೇವೆ. ಎಂಪೆರಿಕಲ್ ಡೇಟಾ ನಿರ್ಧಿಷ್ಟವಾದ ಅಭಿಪ್ರಾಯ ಬರುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಸಭೆಯಲ್ಲಿ ತಿಳಿಸಿದ್ದಾರೆ ಎಂದರು.

ಸಚಿವರುಗಳ ಮತ್ತು ಶಾಸಕರ ಫೋನ್ ಕದ್ದಾಲಿಕೆ ಆರೋಪದ ಬಗ್ಗೆ ಈವರೆಗೆ ಯಾವುದೇ ದೂರು ದಾಖಲಾಗಿಲ್ಲ. ದೂರು ಬಂದರೆ ಪರಿಶೀಲಿಸಿ, ಕದ್ದಾಲಿಕೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ನಾನು ಅಥವಾ ಸಿಎಂ ಆಗಲಿ ಯಾರು ಸಹ ಫೋನ್ ಕದ್ದಾಲಿಕೆಗೆ ಅನುಮತಿ ನೀಡಿಲ್ಲ ಎಂದು ಹೇಳಿದರು.

ನಾನು ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಗಮನಿಸಿದಿಲ್ಲ. ಅವರು ಯಾವ ಅರ್ಥದಲ್ಲಿ‌ ಹೇಳಿದ್ದಾರೆ ಅನ್ನೋದು ಗೊತ್ತಿಲ್ಲ. ನಮ್ಮ ಪಕ್ಷ ಹಾಗೂ ಮತ್ತು ಸರ್ಕಾರ ಸಂವಿಧಾನಕ್ಕೆ ಬದ್ಧವಾಗಿದೆ. ಈ ಆಶಯದೊಂದಿಗೆ ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಮಾಡಿದ್ದೇವೆ. ಸಂವಿಧಾನದ ಆಶಯ ಅನುಷ್ಟಾನಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್.ಸಿ.ಮಹದೆವಪ್ಪ ಅವರು ಮಾತನಾಡಿ, ಒಳ ಮೀಸಲಾತಿ ಸಂಬಂಧ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಹಿರಿಯ ಸಚಿವರ ಜೊತೆ ಸುಧೀರ್ಘ ಸಭೆ ನಡೆಸಲಾಗಿದೆ. ಒಳ‌ಮೀಸಲಾತಿ ಜಾರಿಗಾಗಿ ಈವರೆಗೂ ಆಗಿರುವ ಪ್ರಗತಿಯ ಮಾಹಿತಿಯನ್ನು ನಾಗ ಮೋಹನ್ ದಾಸ್ ಸಮಿತಿ ನೀಡಿದೆ. ಆದಷ್ಟು ಬೇಗ ಒಳಮೀಸಲಾತಿ ಜಾರಿಗೆ ಪ್ರಸ್ತಾಪ ಇಟ್ಟಿದ್ದಾರೆ ಎಂದು ತಿಳಿಸಿದರು.

ದತ್ತಾಂಶ ಆಧಾರದ ಮೇಲೆ ಸುದೀರ್ಘ ಚರ್ಚೆ ಮಾಡಿದ್ದೇವೆ ನಾಗಮೋಹನ್ ದಾಸ್ ಅವರು ವಾರದೊಳಗೆ ಮಧ್ಯಂತರ ವರದಿ ನೀಡುತ್ತಾರೆ. ಆ ವರದಿ ಮೇಲೆ ಒಳಮೀಸಲಾತಿ ಜಾರಿ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಎಂಪೆರಿಕಲ್ ಡೇಟಾ‌ಸೇರಿದಂತೆ ಎಲ್ಲ ವಿಷಯಗಳನ್ನ ಚರ್ಚೆ ಮಾಡಿ, ನಮ್ಮ ಗಮನಕ್ಕೆ ತಂದಿದ್ದಾರೆ.‌ ನಾವು ಒಳ ಮೀಸಲಾತಿ ಜಾರಿ ಮಾಡಬೇಕು ಎಂಬುದು ನಮ್ಮ ಸರ್ಕಾರದ ಬದ್ಧತೆ. ಯಾವುದೇ ಸಮುದಾಯವೂ ಇಷ್ಟೇ ಪರ್ಸೇಂಟ್ ಮೀಸಲಾತಿ ಕೊಡುವಂತೆ ಬೇಡಿಕೆ ಇಟ್ಟಿಲ್ಲ. ಬಹುತೇಕ ಎಲ್ಲಾ ಇಲಾಖೆಗಳು ದತ್ತಾಂಶ ನೀಡಿವೆ. ಸುಪ್ರೀಂಕೋರ್ಟ್ ಮಾರ್ಗಸೂಚಿ ಪ್ರಕಾರ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಒಳ ಮೀಸಲಾತಿ ಜಾರಿ ಆಗುವವರೆಗೂ ಬ್ಯಾಕ್‌ಲಾಗ್ ಹುದ್ದೆ, ಮುಂಬಡ್ತಿ, ನೇಮಕಾತಿ ಯಾವುದನ್ನೂ ಮಾಡುವುದಿಲ್ಲ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಸಚಿವರಾದ ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್, ಶಿವರಾಜ್ ತಂಗಡಗಿ ಅವರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

8 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

8 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

9 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

9 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

9 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

10 hours ago