ರಾಜ್ಯ

ವರದಿ ಸಲ್ಲಿಕೆಯಾದ 20 ದಿನಗಳಲ್ಲಿ ಒಳಮೀಸಲಾತಿ ಜಾರಿ : ಎಚ್‌ಸಿಎಂ

ಬೆಂಗಳೂರು : ಒಳ ಮಿಸಲಾತಿಯ ವಿಚಾರವಾಗಿ ಬಿಜೆಪಿ ನಾಯಕರು ಜನರನ್ನು ದಾರಿ ತಪ್ಪಿಸುವ ಮಾತುಗಳನ್ನಾಡುತ್ತಿದ್ದಾರೆ. ನ್ಯಾ.ನಾಗಮೋಹನ್ ದಾಸ್ ಅವರ ಆಯೋಗದ ವರದಿ ಸಲ್ಲಿಕೆಯಾದ 20 ದಿನಗಳಲ್ಲೇ ರಾಜ್ಯಸರ್ಕಾರ ಒಳಮೀಸಲಾತಿ ಜಾರಿ ಮಾಡಲಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1992 ರಲ್ಲಿ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಗಾಗಿ ನ್ಯಾಯಮೂರ್ತಿ ಸದಾಶಿವ ಆಯೋಗವನ್ನು ರಚನೆ ಮಾಡಿತ್ತು. ಅದರ ವರದಿ ಕೂಡ ಸಲ್ಲಿಕೆಯಾಗಿತ್ತು. ಆದರೆ ಬಿಜೆಪಿ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸಿ ಮುಗಿದ ಅಧ್ಯಾಯ ಎಂದು ಹೇಳಿತ್ತು.

ಈಗ ಹೋರಾಟ ಮಾಡುವುದಾಗಿ ಹೇಳುತ್ತಿರುವ ಗೋವಿಂದ ಕಾರಜೋಳ ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ಎ. ನಾರಾಯಣ ಸ್ವಾಮಿ ಕೇಂದ್ರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದರು. ಈ ಇಬ್ಬರ ಅಧಿಕಾರಾವಧಿಯಲ್ಲೇ ಒಳಮೀಸಲಾತಿ ಜಾರಿಯಾಗದೆ ಸದಾಶಿವ ಅಯೋಗ ವರದಿ ತಿರಸ್ಕಾರವಾಗಿತ್ತು ಎಂದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಒಳಮೀಸಲಾತಿಯನ್ನು ಜಾರಿಗೊಳಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆ ಬಳಿಕ ಸರ್ವೋಚ್ಚ ನ್ಯಾಯಾಲಯ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ತೀರ್ಪು ನೀಡಿದೆ. ಆದನ್ನು ಆಧರಿಸಿ ಎಂಪ್ಯಾರಿಕಲ್ ಡಾಟಾ ಸಂಗ್ರಹಿಸಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಿದ್ದೇವೆ. ಆಯೋಗ ವರದಿ ಸಲ್ಲಿಸಿದ 15-20 ದಿನಗಳ ಒಳಗಾಗಿ ಒಳಮೀಸಲಾತಿಯನ್ನು ಜಾರಿ ಮಾಡುತ್ತೇವೆ ಎಂದರು.

ಒಳಮೀಸಲಾತಿಯ ಬದ್ಧತೆಯನ್ನು ಚಿತ್ರದುರ್ಗದ ಸಮಾವೇಶದಲ್ಲೇ ಕಾಂಗ್ರೆಸ್ ಘೋಷಣೆ ಮಾಡಿದೆ. ಪಕ್ಷ ತನ್ನ ಮಾತಿಗೆ ಕಟಿಬದ್ಧವಾಗಿದೆ. ನುಡಿದಂತೆ ನಡೆಯುತ್ತಿದೆ. ನಾವು ಒಳಮೀಸಲಾತಿ ಜಾರಿ ಮಾಡುವ ಹಂತದಲ್ಲಿರುವಾಗ ಬಿಜೆಪಿಯವರು ಪ್ರತಿಭಟನೆ ನಡೆಸಲು ಮುಂದಾಗಿರುವುದು ರಾಜಕೀಯ ಕಾರಣಕ್ಕೆ. ಇದು ಜನರನ್ನು ಎತ್ತಿ ಕಟ್ಟುವ ದುರುದ್ದೇಶವಾಗಿದೆ ಎಂದು ಆರೋಪಿಸಿದರು.

ಬಿಜೆಪಿಯವರಿಗೆ ಪ್ರತಿಭಟನೆ ನಡೆಸುವ ನೈತಿಕ ಹಕ್ಕಿಲ್ಲ. ಈ ಹಿಂದೆ ವರದಿಯನ್ನು ತಿರಸ್ಕರಿಸಿದವರು, ಮೀಸಲಾತಿ ವಿರುದ್ಧವಾಗಿರುವವರಿಂದ ನಾವು ನೈತಿಕತೆ ಪಾಠ ಕಲಿಯಬೇಕಿಲ್ಲ ಎಂದು ತಿರುಗೇಟು ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

6 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

6 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

6 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

7 hours ago