ರಾಜ್ಯ

ವರದಿ ಸಲ್ಲಿಕೆಯಾದ 20 ದಿನಗಳಲ್ಲಿ ಒಳಮೀಸಲಾತಿ ಜಾರಿ : ಎಚ್‌ಸಿಎಂ

ಬೆಂಗಳೂರು : ಒಳ ಮಿಸಲಾತಿಯ ವಿಚಾರವಾಗಿ ಬಿಜೆಪಿ ನಾಯಕರು ಜನರನ್ನು ದಾರಿ ತಪ್ಪಿಸುವ ಮಾತುಗಳನ್ನಾಡುತ್ತಿದ್ದಾರೆ. ನ್ಯಾ.ನಾಗಮೋಹನ್ ದಾಸ್ ಅವರ ಆಯೋಗದ ವರದಿ ಸಲ್ಲಿಕೆಯಾದ 20 ದಿನಗಳಲ್ಲೇ ರಾಜ್ಯಸರ್ಕಾರ ಒಳಮೀಸಲಾತಿ ಜಾರಿ ಮಾಡಲಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1992 ರಲ್ಲಿ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಗಾಗಿ ನ್ಯಾಯಮೂರ್ತಿ ಸದಾಶಿವ ಆಯೋಗವನ್ನು ರಚನೆ ಮಾಡಿತ್ತು. ಅದರ ವರದಿ ಕೂಡ ಸಲ್ಲಿಕೆಯಾಗಿತ್ತು. ಆದರೆ ಬಿಜೆಪಿ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸಿ ಮುಗಿದ ಅಧ್ಯಾಯ ಎಂದು ಹೇಳಿತ್ತು.

ಈಗ ಹೋರಾಟ ಮಾಡುವುದಾಗಿ ಹೇಳುತ್ತಿರುವ ಗೋವಿಂದ ಕಾರಜೋಳ ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ಎ. ನಾರಾಯಣ ಸ್ವಾಮಿ ಕೇಂದ್ರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದರು. ಈ ಇಬ್ಬರ ಅಧಿಕಾರಾವಧಿಯಲ್ಲೇ ಒಳಮೀಸಲಾತಿ ಜಾರಿಯಾಗದೆ ಸದಾಶಿವ ಅಯೋಗ ವರದಿ ತಿರಸ್ಕಾರವಾಗಿತ್ತು ಎಂದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಒಳಮೀಸಲಾತಿಯನ್ನು ಜಾರಿಗೊಳಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆ ಬಳಿಕ ಸರ್ವೋಚ್ಚ ನ್ಯಾಯಾಲಯ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ತೀರ್ಪು ನೀಡಿದೆ. ಆದನ್ನು ಆಧರಿಸಿ ಎಂಪ್ಯಾರಿಕಲ್ ಡಾಟಾ ಸಂಗ್ರಹಿಸಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಿದ್ದೇವೆ. ಆಯೋಗ ವರದಿ ಸಲ್ಲಿಸಿದ 15-20 ದಿನಗಳ ಒಳಗಾಗಿ ಒಳಮೀಸಲಾತಿಯನ್ನು ಜಾರಿ ಮಾಡುತ್ತೇವೆ ಎಂದರು.

ಒಳಮೀಸಲಾತಿಯ ಬದ್ಧತೆಯನ್ನು ಚಿತ್ರದುರ್ಗದ ಸಮಾವೇಶದಲ್ಲೇ ಕಾಂಗ್ರೆಸ್ ಘೋಷಣೆ ಮಾಡಿದೆ. ಪಕ್ಷ ತನ್ನ ಮಾತಿಗೆ ಕಟಿಬದ್ಧವಾಗಿದೆ. ನುಡಿದಂತೆ ನಡೆಯುತ್ತಿದೆ. ನಾವು ಒಳಮೀಸಲಾತಿ ಜಾರಿ ಮಾಡುವ ಹಂತದಲ್ಲಿರುವಾಗ ಬಿಜೆಪಿಯವರು ಪ್ರತಿಭಟನೆ ನಡೆಸಲು ಮುಂದಾಗಿರುವುದು ರಾಜಕೀಯ ಕಾರಣಕ್ಕೆ. ಇದು ಜನರನ್ನು ಎತ್ತಿ ಕಟ್ಟುವ ದುರುದ್ದೇಶವಾಗಿದೆ ಎಂದು ಆರೋಪಿಸಿದರು.

ಬಿಜೆಪಿಯವರಿಗೆ ಪ್ರತಿಭಟನೆ ನಡೆಸುವ ನೈತಿಕ ಹಕ್ಕಿಲ್ಲ. ಈ ಹಿಂದೆ ವರದಿಯನ್ನು ತಿರಸ್ಕರಿಸಿದವರು, ಮೀಸಲಾತಿ ವಿರುದ್ಧವಾಗಿರುವವರಿಂದ ನಾವು ನೈತಿಕತೆ ಪಾಠ ಕಲಿಯಬೇಕಿಲ್ಲ ಎಂದು ತಿರುಗೇಟು ನೀಡಿದರು.

ಆಂದೋಲನ ಡೆಸ್ಕ್

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

12 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

12 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

13 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

14 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

14 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

15 hours ago