ರಾಜ್ಯ

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ | ನಾಳೆ ವಿಶೇಷ ಸಂಪುಟ ಸಭೆ

ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ನಾಳೆ(ಏ.24)ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಸಮಿತಿ ನೀಡಿರುವ ಒಳಮೀಸಲಾತಿ ವರದಿ ಅನುಷ್ಠಾನ ಮಾಡುವ ಸಂಬಂಧ ಸರ್ಕಾರ ತೀರ್ಮಾನ ಕೈಗೊಳ್ಳುವ ಸಂಭವವಿದೆ. ಒಳ ಮೀಸಲಾತಿ ವಿಚಾರವಾಗಿ ಈ ಸಂಪುಟ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಉಪ ಚುನಾವಣೆಯ ಹಿನ್ನೆಲೆಯಲ್ಲಿ ಒಳ ಮೀಸಲಾತಿಯ ಕುರಿತಾದ ನಿರ್ಧಾರ ಮುಂದೂಡಲಾಗಿತ್ತು. ಹೀಗಾಗಿ ನಾಳೆ ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಒಳಮೀಸಲಾತಿ ನೀಡುವ ವಿಚಾರವಾಗಿ ಎಡಗೈ ಮತ್ತು ಬಲಗೈ ನಡುವಿನ ಭಿನ್ನಾಭಿಪ್ರಾಯ ತೀವ್ರಗೊಂಡಿದೆ. ಇದು ರಾಜ್ಯ ಸರ್ಕಾರಕ್ಕೆ ತಲೆನೋವು ಉಂಟು ಮಾಡಿದೆ. ಎಸ್‌ಸಿ ಸಮುದಾಯದಲ್ಲಿರುವ 101ಕ್ಕೂ ಹೆಚ್ಚು ಉಪ-ಜಾತಿಗಳಲ್ಲಿ, ಅತಿ ಹೆಚ್ಚು ಹಿಂದುಳಿದಿರುವ ಸಮುದಾಯಗಳಿಗೆ ಮೀಸಲಾತಿಯಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವುದು ಒಳಮೀಸಲಾತಿಯ ಮುಖ್ಯವಾದ ಉದ್ದೇಶವಾಗಿದೆ.

ಮೀಸಲಾತಿಯಲ್ಲಿ ನ್ಯಾಯಯುತ ಪಾಲು ಸಿಗುತ್ತಿಲ್ಲ ಎಂದು ಆರೋಪಿಸಿ, ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಎಡಗೈ ಸಮುದಾಯಗಳು, ಮಾದಿಗ ಮತ್ತು ಇತರ ಉಪ-ಜಾತಿಗಳು ಒತ್ತಾಯಿಸುತ್ತಿವೆ. ಈ ನಿಟ್ಟಿನಲ್ಲಿ ಹೋರಾಟ, ಚಳವಳಿಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಈ ಹಿಂದೆ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿತ್ತು. ಆದರೆ ದಾವಣಗೆರೆ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಸಭೆ ಮುಂದೂಡಲಾಗಿತ್ತು.

ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15 ರಿಂದ 17ಕ್ಕೆ ಏರಿಕೆ ಮಾಡಲಾಗಿದೆ. ಅಲ್ಲದೆ. ಎಸ್ ಟಿ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಏರಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಒಟ್ಟು ಮೀಸಲಾತಿ ಪ್ರಮಾಣ ಶೇ 50 ರಿಂದ 56ಕ್ಕೆ ಏರಿಕೆಯಾಗಿದೆ. ಹೆಚ್ಚಳ ಮಾಡಿದ ಪ್ರಮಾಣಕ್ಕೆ ಅನುಗುಣವಾಗಿ ಒಳಮೀಸಲಾತಿ ಕಲ್ಪಿಸಲು ಮಸೂದೆಯನ್ನು ರೂಪಿಸಲಾಗಿದೆ. ಇದಕ್ಕೆ ರಾಜ್ಯಪಾಲರು ಕೂಡಾ ಸಹಿ ಹಾಕಿದ್ದಾರೆ.

ಸಂಪುಟ ಸಭೆ ಏಕೆ?
ಶೇ.17 ಮೀಸಲಾತಿಯಲ್ಲಿ 6:6:5ರಂತೆ ಸರ್ವಸಮ್ಮತದಿಂದ ಒಳಮೀಸಲಾತಿ ಅಳವಡಿಸುವ ಬಗ್ಗೆ ಈ ಹಿಂದೆ ತೀರ್ಮಾನಿಸಲಾಗಿತ್ತು. ಆದರೆ, ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಒಟ್ಟು ಶೇ.50 ಮೀಸಲಾತಿ ಮಿತಿಯಲ್ಲಿ ಶೇ.15 ಎಸ್‌ಸಿ ಮೀಸಲಾತಿಯಲ್ಲೇ ಒಳಮೀಸಲಾತಿಯನ್ನು ನೀಡುವ ಬಗ್ಗೆ ಚರ್ಚೆ ನಡೆದಿದೆ.

ಎ,ಬಿ,ಸಿ ಒಳಮೀಸಲಾತಿ ವರ್ಗೀಕರಣಕ್ಕೆ ಎಷ್ಟು ಪ್ರಮಾಣದಲ್ಲಿ ಒಳಮೀಸಲಾತಿ ಕಲ್ಪಿಸಬೇಕೆಂಬ ಬಗ್ಗೆ ಚರ್ಚಿಸಿ ತೀರ್ಮಾನಿಸಬೇಕಿದೆ. ಈ ನಿಟ್ಟಿನಲ್ಲಿ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಮತದಾರರು ನಿರ್ಣಾಯಕ ಸಂಖ್ಯೆಯಲ್ಲಿದ್ದಾರೆ. ಒಂದು ವೇಳೆ ಈ ಚುನಾವಣೆಗೂ ಮೊದಲು ಒಳ ಮೀಸಲಾತಿ ಘೋಷಿಸಿದ್ದರೆ ಅದು ವ್ಯತಿರಿಕ್ತ ಪರಿಣಾಮ ಉಂಟಾಗುವ ಆತಂಕವಿತ್ತು. ಹಾಗಾಗಿ, ಉಪಚುನಾವಣೆಯ ಫಲಿತಾಂಶದ ಮೇಲೆ ಯಾವುದೇ ನಕಾರಾತ್ಮಕ ಪರಿಣಾಮ ಬೀರಬಾರದೆಂಬ ಉದ್ದೇಶದಿಂದ ಸಂಪುಟ ಸಭೆ ನಡೆಸಿರಲಿಲ್ಲ.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

10 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

18 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

18 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

18 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

21 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

21 hours ago