ರಾಜ್ಯ

ಒಳ ಮೀಸಲಾತಿ | ಪ್ರತಿಭಟನೆ ವೇಳೆ ಡೀಸೆಲ್‌ ಸುರಿದುಕೊಂಡು ಆತ್ಮಹತ್ಯೆಗೆ ಮುಂದಾದ ಮಹಿಳೆ

ಬೆಂಗಳೂರು : ಪರಿಶಿಷ್ಟ ಜಾತಿ ಒಳಮೀಸಲಾತಿಯಲ್ಲಿ ಅನ್ಯಾಯ ಆಗಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಹಿಳೆಯೊಬ್ಬರು ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಬೆಂಗಳೂರಿನ ಪ್ರೀಡಂಪಾರ್ಕ್ ನಲ್ಲಿ ಭೋವಿ, ಕೊರಚ, ಕೊರಮ, ಲಂಬಾಣಿ ಮುಂತಾದ ಸಮುದಾಯಗಳು ಪ್ರತಿಭಟನೆ ನಡೆಸುತ್ತಿದ್ದು, ನಾಗಮೋಹನ್ ದಾಸ್ ವರದಿಯ ಪ್ರಕಾರ, ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ಹೀಗಾಗಿ ವೈಜ್ಞಾನಿಕ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿವೆ.

ಪ್ರತಿಭಟನೆ ವೇಳೆ ವೀಣಾ ಎಂಬ ಮಹಿಳೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅಲ್ಲಿದ್ದವರು ಅವರನ್ನ ರಕ್ಷಣೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾಡ್ಗಿಚ್ಚು ತಡೆಗೆ ಮುನ್ನೆಚ್ಚರಿಕೆ ವಹಿಸಿ : ಅರಣ್ಯಾಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…

10 mins ago

ಸಿಲಿಕಾನ್‌ ಸಿಟಿಗೆ ಟ್ರಾಫಿಕ್‌ ಹೊರೆ : ಬೆಂಗಳೂರು ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ 2ನೇ ನಗರ

ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…

18 mins ago

ಮೈಸೂರಿನ ಒರಿಜಿನಲ್‌ ಮೈಲಾರಿ ಹೋಟೆಲ್‌ ಇದೀಗ ಬೆಂಗಳೂರಲ್ಲೂ ಲಭ್ಯ

ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…

34 mins ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ 25 ಲಕ್ಷ ನಗದು ಬಹುಮಾನ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…

2 hours ago

ರಾಜ್ಯಪಾಲರು ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…

2 hours ago

ಕೇರಳದಲ್ಲಿ 3 ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…

3 hours ago