ಬೆಂಗಳೂರು: ರಾಜ್ಯ ಬಿಜೆಪಿ ಪಾಳಯದಲ್ಲಿ ಆಂತರಿಕ ಕಲಹ ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ಅದನ್ನು ಶಮನ ಮಾಡಲು ಬಿಜೆಪಿ ಹೈಕಮಾಂಡ್ ಮಧ್ಯಪ್ರವೇಶಿಸಿದೆ.
ಬಿಜೆಪಿ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಕೆಲ ದಿನಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನಡುವೆ ಬಣಗಳ ಬಡಿದಾಟ ನಡೆಯುತ್ತಿದೆ. ಈ ಬಡಿದಾಟವನ್ನು ಶಮನ ಮಾಡಲು ನಾಳೆ(ಜನವರಿ.21) ಕರ್ನಾಟಕಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಅವರು ಭೇಟಿ ನೀಡುತ್ತಿದ್ದು, ಮೂರು ಪ್ರಮುಖ ಸಭೆಗಳಲ್ಲಿ ಭಾಗವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಅವರು ಮಂಗಳವಾರ(ಜ.21) ಮಧ್ಯಾಹ್ನ 3 ಗಂಟೆಗೆ ಸಂಸದರು ಹಾಗೂ ಶಾಸಕರೊಂದಿಗೆ ಸಮಾಲೋಚನೆ ನಡೆಸಿ ಅಭಿಪ್ರಾಯ ಪಡೆಯಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಬಿಜೆಪಿ ಸಂಘಟನೆ ಪರ್ವದ ಪರಿಶೀಲನೆ ಮಾಡಲಿದ್ದಾರೆ. ಅಲ್ಲದೇ ಈ ವೇಳೆಯೇ ಜಿಲ್ಲಾಧ್ಯಕ್ಷ ಹಾಗೂ ರಾಜ್ಯಾಧ್ಯಕ್ಷ ಚುನಾವಣೆ ಬಗ್ಗೆ ಚರ್ಚಿಸಲಿದ್ದಾರೆ. ಇನ್ನೂ ಸಂಜೆ 7 ಗಂಟೆಗೆ ಕೋರ್ ಕಮಿಟಿ ಸಭೆ ನಡೆಯಲಿದ್ದು, ರಾಜ್ಯದ ವಿದ್ಯಮಾನಗಳ ಕುರಿತು ಚರ್ಚೆಯಾಗಲಿದೆ. ಇದೇ ಸಂದರ್ಭದಲ್ಲಿ ಮುಖ್ಯವಾಗಿ ಯತ್ನಾಳ್ ಮತ್ತು ವಿಜಯೇಂದ್ರ ಬಣಗಳ ಹೇಳಿಕೆಗಲ ಬಗ್ಗೆ ಗಂಭೀರವಾಗಿ ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…