ರಾಜ್ಯ

“ವಡ್ಡರ್ಸೆ ರಘುರಾಮ ಶೆಟ್ಟಿ” ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಅಹ್ವಾನ

ಬೆಂಗಳೂರು: ಹಿರಿಯ ಪತ್ರಕರ್ತ ದಿ.ವಡ್ಡರ್ಸೆ ರಘುರಾಮ ಶೆಟ್ಟಿ ಅವರ ನೆನಪಿನಾರ್ಥ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ್ದಾರೆ. ಪ್ರಶಸ್ತಿಯು 2 ಲಕ್ಷ ರೂಪಾಯಿ ನಗದು, ಸ್ಮರಣಿಕೆ ಒಳಗೊಂಡಿದೆ.

“ವಡ್ಡರ್ಸೆ ರಘುರಾಮ ಶೆಟ್ಟಿ” ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಹಾಗೂ ಸಾರ್ವಜನಿಕರು, ಸಂಘ – ಸಂಸ್ಥೆಗಳು ಅರ್ಹ ಪತ್ರಕರ್ತರನ್ನು ಪ್ರಶಸ್ತಿಗೆ ನಾಮನಿರ್ದೇಶನ ಮಾಡಬಹುದಾಗಿದೆ.

ವಡ್ಡರ್ಸೆ ರಘುರಾಮಶೆಟ್ಟಿ ಅವರ ಪರಿಚಯ

ಓದುಗರ ಸಂಪಾದಕ ಎಂದೇ ಹೆಸರಾಗಿದ್ದ ದಿ.ವಡ್ಡರ್ಸೆ ರಘುರಾಮ ಶೆಟ್ಟಿಯವರು. 1960ರ ದಶಕದಿಂದ ಸುಮಾರು ನಾಲ್ಕು ದಶಕಗಳ ಕಾಲ ಕನ್ನಡ ಪತ್ರಿಕೋದ್ಯಮದಲ್ಲಿ ಮಹತ್ವದ ಸೇವೆಗೈದಿದ್ದಾರೆ. ಮಾಧ್ಯಮವು ವಾಣಿಜ್ಯೋದ್ಯಮಿಗಳ ಹಾಗೂ ಈ ರಂಗದ ಪರಿಚಯವಿಲ್ಲದವರ ಆಡುಂಬೊಲವಾಗಬಾರದು ಎಂಬ ಮಹತ್ವಾಕಾಂಕ್ಷೆ ಹೊಂದಿದ್ದರು. ಸಮಾಜದ ವಂಚನೆಯ ಜಾಲಗಳನ್ನು ಬಯಲಿಗೆಳೆಯುವ ಉದ್ದೇಶದಿಂದ 1984 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ “ಮುಂಗಾರು” ದಿನಪತ್ರಿಕೆಯನ್ನು ಪ್ರಾರಂಭಿಸಿ, ನಿರ್ಭೀತ ಬರಹಗಳ ಮೂಲಕ ಪತ್ರಿಕಾ ವೃತ್ತಿಯಲ್ಲಿ ಬದಲಾವಣೆಯನ್ನು ತಂದವರು. ಕನ್ನಡ ಪತ್ರಿಕೋದ್ಯಮದಲ್ಲಿ ದೀನದಲಿತರ ಹಾಗೂ ದುರ್ಬಲ ವರ್ಗದವರ ಪರವಾಗಿ ಧ್ವನಿಯೆತ್ತುವ, ದನಿಯಿಲ್ಲದವರ ದನಿಯಾಗಿದ್ದರು. ಪಾರದರ್ಶಕ ಮತ್ತು ಜವಾಬ್ದಾರಿಯುತ ಆಡಳಿತವನ್ನು ಉತ್ತೇಜಿಸಲು ಮತ್ತು ಸಾಮಾಜಿಕ ಬದಲಾವಣೆಯನ್ನು ತರಲು ಶ್ರಮಿಸಿದರು.

ಪ್ರಶಸ್ತಿಗೆ ಅರ್ಹತೆಗಳು

ಮುದ್ರಣ ಅಥವಾ ವಿದ್ಯುನ್ಮಾನ ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಠ 15 ವರ್ಷ ಸೇವಾನುಭವ ಹೊಂದಿರಬೇಕು. ಹಿರಿಯರಿಗೆ ಆದ್ಯತೆ ನೀಡಲಾಗುವುದು. ಸಾಮಾಜಿಕ ನ್ಯಾಯದ ಕಾಳಜಿ ಹೊಂದಿರುವ 10 ರಿಂದ 15 ಲೇಖನಗಳು ಪ್ರಕಟವಾಗಿರಬೇಕು ಅಥವಾ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಈ ಕುರಿತು ವಿಶೇಷ ವರದಿ, ಚರ್ಚೆ, ಸಂವಾದ ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ನಿರ್ಮಿಸಿರಬೇಕು.

ನಾಮನಿರ್ದೇಶನಗಳನ್ನು ಸಲ್ಲಿಸಲು 2024ನೇ ಅಕ್ಟೋಬರ್ 21 ಕೊನೆಯ ದಿನಾಂಕವಾಗಿರುತ್ತದೆ.
ನಾಮನಿರ್ದೇಶನಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾಸೌಧ, ಭಗÀವಾನ್ ಮಹಾವೀರ ರಸ್ತೆ, (ಇನ್ ಫೆಂಟ್ರಿ ರಸ್ತೆ), ಬೆಂಗಳೂರು 560 001 ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ tsraward@gmail.com ಇ-ಮೇಲ್ ಮೂಲಕ ಸಲ್ಲಿಸಬಹುದಾಗಿದೆ. ಇತರೆ ಜಿಲ್ಲೆಗಳ ಪತ್ರಕರ್ತರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮನ್‌ಮುಲ್ ಅಧ್ಯಕ್ಷರಾಗಿ ಹರೀಶ್‌ಬಾಬು ಆಯ್ಕೆ ಬಹುತೇಕ ಖಚಿತ

ಬಿ.ಟಿ. ಮೋಹನ್ ಕುಮಾರ್ ಯು.ಸಿ.ಶಿವಕುಮಾರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ  ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್)…

3 mins ago

ಅಂದು ಮಿನಿ ವಿಧಾನಸೌಧ, ಇಂದು ಪ್ರಮೋದಾ ದೇವಿ ಒಡೆಯರ ಆಸ್ತಿ?

ಎಸ್.ಎಸ್.ಭಟ್ ನಂಜನಗೂಡು ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಫಲಕ ನಂಜನಗೂಡು: ೧೯೭೦- ೮೦ರ ದಶಕಗಳಲ್ಲಿ ಮಿನಿ ವಿಧಾನಸೌಧವಿದ್ದ ಜಾಗ ಇಂದು ಪ್ರಮೋದಾದೇವ…

8 mins ago

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

21 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

21 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

21 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

21 hours ago