ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್ಸಿಬಿ ಮೊದಲ ಪಂದ್ಯವನ್ನು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈ ಹಿನ್ನೆಲೆ ಈಗಾಗಲೇ ತಂಡ ತಯಾರಿ ಆರಂಭಿಸಿದೆ.
ತಂಡದ ಸಹ ಆಟಗಾರರೊಂದಿಗೆ ಮಾತನಾಡಿರುವ ಕೊಹ್ಲಿ, ಕಳೆದ 2-3 ಸೀಸನ್ಗಳಲ್ಲಿ ನಾವು ತುಂಬಾ ಕಷ್ಟಪಟ್ಟಿದ್ದೇವೆ. ಕಳೆದ ವರ್ಷ ಸಾಧನೆ ಮಾಡಿದ್ದೇವೆ. ಆದರೆ ಈಗ ಇನ್ನಷ್ಟು ಕಷ್ಟವಾಗಲಿದೆ ಎಂದು ಎಚ್ಚರಿಸಿದ್ದಾರೆ.
ಇತರ ತಂಡಗಳು ನಮ್ಮ ವಿರುದ್ಧ ಇನ್ನಷ್ಟು ಆಕ್ರಮಣಕಾರಿ ಆಟ ಆಡಲಿವೆ. ಒಂದು ನಿಮಿಷವೂ ವ್ಯರ್ಥ ಮಾಡಬಾರದು. ಪ್ರತಿಯೊಂದು ಸೆಷನ್ಗೂ 120 ಪರ್ಸೆಂಟ್ ಕೊಡುಗೆ ನೀಡಬೇಕು. ಈ ಎರಡೂವರೆ ತಿಂಗಳು ನಮ್ಮ ಪಾಲಿಗೆ ಬಹಳ ಮುಖ್ಯ ಎಂದು ತಂಡವನ್ನು ಕೊಹ್ಲಿ ಹುರಿದುಂಬಿಸಿದ್ದಾರೆ.
ಆರ್ಸಿಬಿ ಕಳೆದ ಸೀಸನ್ನಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿತ್ತು. ಈಗ ಚಾಂಪಿಯನ್ ತಂಡವಾಗಿ ಕಣಕ್ಕಿಳಿಯುತ್ತಿರುವುದರಿಂದ ಒತ್ತಡ ಹೆಚ್ಚಾಗಲಿದೆ. ಈ ಕಾರಣಕ್ಕೇ ಸಹ ಆಟಗಾರರಿಗೆ ಕೊಹ್ಲಿ ಕಿವಿಮಾತು ಹೇಳಿದ್ದಾರೆ. ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಕೂಡ ಹೊಸ ಆಟಗಾರರ ಸೇರ್ಪಡೆಯಿಂದ ತಂಡ ಮತ್ತಷ್ಟು ಬಲವಾಗಿದೆಯೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…