ಬೆಂಗಳೂರು : ಟಾಟಾ ಐಪಿಎಲ್ನ ಕ್ರಿಕೆಟ್ ಪಂದ್ಯಗಳು ಏಪ್ರಿಲ್ 15 ಹಾಗೂ ಏಪ್ರಿಲ್ 24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಹೀಗಾಗಿ ವಿಕ್ಷಣೆಗೆ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ವಿವಿಧ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೊ ಸಂಚಾರದ ಅವಧಿಯನ್ನು ವಿಸ್ತರಿಸಲಾಗಿದೆ.
ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಅನುಕೂಲಕರ ಸಂಚಾರವನ್ನು ಕಲ್ಪಿಸುವ ಉದ್ದೇಶದಿಂದ ಬಿಎಂಆರ್ಸಿಎಲ್ ಏ.15 ಮತ್ತು 24ರ ರಾತ್ರಿ ಮೆಟ್ರೋ ರೈಲಿನ ಸೇವಾ ಅವಧಿಯನ್ನು ವಿಸ್ತರಿಸಲಾಗುತ್ತಿದೆ. ಈ ದಿನಗಳಲ್ಲಿ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಗಳು ರಾತ್ರಿ 11 ಗಂಟೆಯಿಂದ ಮುಂದಿನ ದಿನದ ಮುಂಜಾನೆ 2 ಗಂಟೆಯವರೆಗೆ ವಿಸ್ತರಿಸಲಾಗಿದೆ.
ಐಪಿಎಲ್ ಟಿಕೆಟ್ ಇರುವವರು ಅಂದು ನಮ್ಮ ಮೆಟ್ರೊದಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…