ರಾಜ್ಯ

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ ಅಧಿಕಾರಿಗಳು ಮತ್ತು KSCA ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಸುರಕ್ಷತೆ ಕುರಿತಾಗಿ ಸುದೀರ್ಘ ಸಭೆ ನಡೆಸಿ ಸಲಹೆ, ಸೂಚನೆಗಳನ್ನು ನೀಡಿದರು.

ಕ್ರಿಕೆಟ್ ಪ್ರೇಮಿಗಳ ಸುರಕ್ಷತೆಗೆ ಕ್ರೀಡಾಂಗಣದ ಒಳಗೆ ಮತ್ತು ಕ್ರೀಡಾಂಗಣದ ಸುತ್ತ ರೂಪಿಸಿರುವ ಭದ್ರತಾ ವ್ಯವಸ್ಥೆ, ನಗರದ ಸಂಚಾರ ವ್ಯವಸ್ಥೆಯಲ್ಲಿ ಮಾಡಿಕೊಳ್ಳಲಾಗಿರುವ ಬದಲಾವಣೆಗಳು, ಪಾರ್ಕಿಂಗ್ ವ್ಯವಸ್ಥೆ, ಕ್ರೀಡಾಂಗಣದ ಒಳಗೆ ಕುಡಿಯುವ ನೀರು ಸೇರಿದಂತೆ ಇತರೆ ಅತ್ಯಾವಶ್ಯಕ ಸಂಗತಿಗಳ ಕುರಿತಾಗಿ ಮಾಹಿತಿ ಪಡೆದುಕೊಂಡರು.‌

ಮೆಟ್ರೋ ರೈಲಿನ ಮೇಲೆ ಬೀಳುವ ಪ್ರಯಾಣಿಕರ ಸಾಂದ್ರತೆ, ಮೆಟ್ರೋ ಸಂಚರಿಸುವ ವೇಳಾಪಟ್ಟಿ, ಮೆಟ್ರೋ ನಿಲ್ದಾಣಗಳಲ್ಲಿ ಮಾಡಿಕೊಳ್ಳಲಾಗಿರುವ ಹೆಚ್ಚುವರಿ ಭದ್ರತೆ, ಸುರಕ್ಷತೆ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದು ಸಣ್ಣ ಅಹಿತಕರ ಘಟನೆಗೂ ಅವಕಾಶ ಆಗದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಹಲವು ಸೂಚನೆಗಳನ್ನು ನೀಡಿದರು.ಪಂದ್ಯಾವಳಿ ಆಯೋಜನೆಗೆ ಸರ್ಕಾರ ವಿಧಿಸಿರುವ ಷರತ್ತುಗಳು ಮತ್ತು ಎಚ್ಚರಿಕೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಭೆಯಲ್ಲಿ ಸೂಚನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

4 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

4 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

16 hours ago