ರಾಜ್ಯ

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ ಅಧಿಕಾರಿಗಳು ಮತ್ತು KSCA ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಸುರಕ್ಷತೆ ಕುರಿತಾಗಿ ಸುದೀರ್ಘ ಸಭೆ ನಡೆಸಿ ಸಲಹೆ, ಸೂಚನೆಗಳನ್ನು ನೀಡಿದರು.

ಕ್ರಿಕೆಟ್ ಪ್ರೇಮಿಗಳ ಸುರಕ್ಷತೆಗೆ ಕ್ರೀಡಾಂಗಣದ ಒಳಗೆ ಮತ್ತು ಕ್ರೀಡಾಂಗಣದ ಸುತ್ತ ರೂಪಿಸಿರುವ ಭದ್ರತಾ ವ್ಯವಸ್ಥೆ, ನಗರದ ಸಂಚಾರ ವ್ಯವಸ್ಥೆಯಲ್ಲಿ ಮಾಡಿಕೊಳ್ಳಲಾಗಿರುವ ಬದಲಾವಣೆಗಳು, ಪಾರ್ಕಿಂಗ್ ವ್ಯವಸ್ಥೆ, ಕ್ರೀಡಾಂಗಣದ ಒಳಗೆ ಕುಡಿಯುವ ನೀರು ಸೇರಿದಂತೆ ಇತರೆ ಅತ್ಯಾವಶ್ಯಕ ಸಂಗತಿಗಳ ಕುರಿತಾಗಿ ಮಾಹಿತಿ ಪಡೆದುಕೊಂಡರು.‌

ಮೆಟ್ರೋ ರೈಲಿನ ಮೇಲೆ ಬೀಳುವ ಪ್ರಯಾಣಿಕರ ಸಾಂದ್ರತೆ, ಮೆಟ್ರೋ ಸಂಚರಿಸುವ ವೇಳಾಪಟ್ಟಿ, ಮೆಟ್ರೋ ನಿಲ್ದಾಣಗಳಲ್ಲಿ ಮಾಡಿಕೊಳ್ಳಲಾಗಿರುವ ಹೆಚ್ಚುವರಿ ಭದ್ರತೆ, ಸುರಕ್ಷತೆ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದು ಸಣ್ಣ ಅಹಿತಕರ ಘಟನೆಗೂ ಅವಕಾಶ ಆಗದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಹಲವು ಸೂಚನೆಗಳನ್ನು ನೀಡಿದರು.ಪಂದ್ಯಾವಳಿ ಆಯೋಜನೆಗೆ ಸರ್ಕಾರ ವಿಧಿಸಿರುವ ಷರತ್ತುಗಳು ಮತ್ತು ಎಚ್ಚರಿಕೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಭೆಯಲ್ಲಿ ಸೂಚನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago