ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದ ಕಾರ್ಮೋದ ಮತ್ತಷ್ಟು ಹೆಚ್ಚಾಗಿದ್ದು, ಇದರ ಪರಿಣಾಮ ಸಿಲಿಕಾನ್ ಸಿಟಿ ಬೆಂಗಳೂರಿನ ವಿಮಾನಯಾನದ ಮೇಲೆ ಬೀರಿದೆ.
ಸುರಕ್ಷತೆಯ ದೃಷ್ಟಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅರಬ್ ರಾಷ್ಟ್ರಗಳಿಗೆ ಸಂಚರಿಸಬೇಕಿದ್ದ ಮತ್ತು ಅಲ್ಲಿಂದ ಬರಬೇಕಿದ್ದ ಒಟ್ಟು 21 ವಿಮಾನಗಳ ಹಾರಾಟವನ್ನು ದಿಢೀರ್ ರದ್ದುಗೊಳಿಸಲಾಗಿದೆ.
ಪ್ರಯಾಣಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಬೆಂಗಳೂರಿನಿಂದ ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ 11 ವಿಮಾನಗಳು ಹಾಗೂ ಅಲ್ಲಿಂದ ಬೆಂಗಳೂರಿಗೆ ಆಗಮಿಸಬೇಕಿದ್ದ 10 ವಿಮಾನಗಳ ಸಂಚಾರ ಸ್ಥಗಿತಗೊಂಡಿದೆ.
ಮಾರ್ಚ್.1ರಿಂದ ಮಾರ್ಚ್.9ರ ನಡುವೆ ಈಗಾಗಲೇ 200ಕ್ಕೂ ಹೆಚ್ಚು ಅಂತರಾಷ್ಟ್ರೀಯ ವಿಮಾನಗಳು ರದ್ದಾಗಿವೆ. ಇದರಲ್ಲಿ ಮಾರ್ಚ್.2ರಂದು 72 ಮತ್ತು ಮಾರ್ಚ್.4ರಂದು 34 ವಿಮಾನಗಳು ಸೇರಿವೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…