ರಾಜ್ಯ

ಇಸ್ರೇಲ್-ಇರಾನ್‌ ಸಂಘರ್ಷದ ಎಫೆಕ್ಟ್:‌ ಬೆಂಗಳೂರಿನಲ್ಲಿಂದು 21 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಯುದ್ಧದ ಕಾರ್ಮೋದ ಮತ್ತಷ್ಟು ಹೆಚ್ಚಾಗಿದ್ದು, ಇದರ ಪರಿಣಾಮ ಸಿಲಿಕಾನ್‌ ಸಿಟಿ ಬೆಂಗಳೂರಿನ ವಿಮಾನಯಾನದ ಮೇಲೆ ಬೀರಿದೆ.

ಸುರಕ್ಷತೆಯ ದೃಷ್ಟಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅರಬ್‌ ರಾಷ್ಟ್ರಗಳಿಗೆ ಸಂಚರಿಸಬೇಕಿದ್ದ ಮತ್ತು ಅಲ್ಲಿಂದ ಬರಬೇಕಿದ್ದ ಒಟ್ಟು 21 ವಿಮಾನಗಳ ಹಾರಾಟವನ್ನು ದಿಢೀರ್‌ ರದ್ದುಗೊಳಿಸಲಾಗಿದೆ.

ಪ್ರಯಾಣಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಬೆಂಗಳೂರಿನಿಂದ ಅರಬ್‌ ರಾಷ್ಟ್ರಗಳಿಗೆ ತೆರಳಬೇಕಿದ್ದ 11 ವಿಮಾನಗಳು ಹಾಗೂ ಅಲ್ಲಿಂದ ಬೆಂಗಳೂರಿಗೆ ಆಗಮಿಸಬೇಕಿದ್ದ 10 ವಿಮಾನಗಳ ಸಂಚಾರ ಸ್ಥಗಿತಗೊಂಡಿದೆ.

ಮಾರ್ಚ್.‌1ರಿಂದ ಮಾರ್ಚ್.‌9ರ ನಡುವೆ ಈಗಾಗಲೇ 200ಕ್ಕೂ ಹೆಚ್ಚು ಅಂತರಾಷ್ಟ್ರೀಯ ವಿಮಾನಗಳು ರದ್ದಾಗಿವೆ. ಇದರಲ್ಲಿ ಮಾರ್ಚ್.‌2ರಂದು 72 ಮತ್ತು ಮಾರ್ಚ್.‌4ರಂದು 34 ವಿಮಾನಗಳು ಸೇರಿವೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

7 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

8 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

8 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

17 hours ago