ರಾಜ್ಯ

ಇರಾನ್-ಇಸ್ರೇಲ್‌ ಸಂಘರ್ಷದ ಎಫೆಕ್ಟ್:‌ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಕುಸಿತ

ಬೆಂಗಳೂರು: ಇಸ್ರೇಲ್-ಇರಾನ್ ನಡುವಿನ ಯುದ್ಧ ಪರಿಸ್ಥಿತಿಯಿಂದಾಗಿ ಚಿನ್ನ ಮತ್ತು ಬೆಳ್ಳಿ ದರಗಳ ಸತತ ಕುಸಿತ ಮುಂದುವರೆದಿದೆ.

ಇಂದೂ ಕೂಡ ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. 24 ಕ್ಯಾರೆಟ್‍ನ ಚಿನ್ನ ಗ್ರಾಂಗೆ 595 ರೂ.ನಷ್ಟು ಕುಸಿತವಾಗಿದ್ದರೆ, ಬೆಳ್ಳಿ 1 ಕೆಜಿಗೆ 15 ಸಾವಿರ ರೂ.ಗಳಷ್ಟು ಕುಸಿತವಾಗಿದೆ.

ಲಭ್ಯವಿರುವ ಮಾರುಕಟ್ಟೆ ಮಾಹಿತಿ ಪ್ರಕಾರ, 24 ಕ್ಯಾರೆಟ್ ಚಿನ್ನ ಪ್ರತಿ ಗ್ರಾಂಗೆ 595 ರೂ.ನಷ್ಟು ಇಳಿಕೆಯಾಗಿದ್ದು, 14,002 ರೂ.ಗೆ ತಲುಪಿದೆ. 22 ಕ್ಯಾರೆಟ್‍ನ ಚಿನ್ನ ಪ್ರತಿ ಗ್ರಾಂಗೆ 545 ರೂ.ನಷ್ಟು ಇಳಿಕೆಯಾಗಿದ್ದು, 12,835 ರೂ.ನಷ್ಟಿದೆ.

ಆಭರಣ ಚಿನ್ನವಾದ 18 ಕ್ಯಾರೆಟ್‍ನ ಚಿನ್ನ 446 ರೂ.ಗಳಷ್ಟು ಕಡಿಮೆಯಾಗಿದ್ದು, ಗ್ರಾಂಗೆ 10502 ರೂ.ಗೆ ತಲುಪಿದೆ. ಮಾ.14ರಿಂದ ಇಳಿಕೆಯಾಗುತ್ತಿರುವ ಚಿನ್ನದ ದರವು ಮಾ.17 ರಂದು 24 ಕ್ಯಾರೆಟ್‍ನ ಗ್ರಾಂ ಚಿನ್ನ 66 ರೂ. ಹಾಗೂ 22 ಕ್ಯಾರೆಟ್‍ನ ಚಿನ್ನ ಗ್ರಾಂಗೆ 60 ರೂ. ಏರಿಕೆಯಾಗಿರುವುದನ್ನು ಹೊರತುಪಡಿಸಿದರೆ ನಿರಂತರ ಇಳಿಕೆಯಾಗಿದೆ.

ಅಂದು 24 ಕ್ಯಾರೆಟ್‍ನ ಚಿನ್ನ 15,966 ರೂ.ನಷ್ಟಿತ್ತು. ಇಂದು 14,002 ರೂ.ಗೆ ಇಳಿದಿದ್ದು, 964 ರೂ.ನಷ್ಟು ಇಳಿಕೆಯಾಗಿದೆ. ಅದೇ ರೀತಿ 22 ಕ್ಯಾರೆಟ್‍ನ ಚಿನ್ನ ಮಾ.14 ರಂದು 14,635 ರೂ.ನಷ್ಟಿತ್ತು. ಇಂದು 12,835 ರೂ.ನಷ್ಟಿದೆ. ಸುಮಾರು 1,800 ರೂ.ಗಳಷ್ಟು ಪ್ರತಿ ಗ್ರಾಂಗೆ ಇಳಿಕೆಯಾಗಿರುವುದು ಕಂಡುಬಂದಿದೆ.

ನಾಗಾಲೋಟದಲ್ಲಿ ಏರಿಕೆಯಾಗುತ್ತಿದ್ದ ಬೆಳ್ಳಿಯು ಇಂದು ಪ್ರತಿ ಕೆಜಿಗೆ 15,000 ರೂ.ನಷ್ಟು ಇಳಿಕೆಯಾಗಿದ್ದು, 2,30,000 ರೂ.ಗೆ ತಲುಪಿದೆ. ಚಿನ್ನದಂತೆ ಬೆಳ್ಳಿಯೂ ಸತತವಾಗಿ ಇಳಿಕೆಯಾಗುತ್ತಿದ್ದು, ಮಾ.14ರ ನಂತರ ಇಂದಿನವರೆಗೆ ಇಳಿಕೆಯಾಗಿರುವುದು ಕಂಡುಬಂದಿದೆ. ಆದರೆ ಮಾ.17 ರಂದು 5 ಸಾವಿರದಷ್ಟು ಏರಿಕೆಯಾಗಿತ್ತು. ಮಾ.14 ರಂದು 2,75,000 ರೂ.ಗಳಿದ್ದ ಬೆಳ್ಳಿದರವು ಇಂದು 2,30,000 ರೂ.ಗೆ ಕುಸಿದಿದ್ದು, 9 ದಿನದಲ್ಲಿ 40 ಸಾವಿರ ರೂ.ನಷ್ಟು ಕುಸಿತವಾಗಿದೆ.

ಮಧ್ಯಪ್ರಾಚ್ಯದ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಿದ್ದು, ಅದರ ಪರಿಣಾಮ ಷೇರುಪೇಟೆ ಮೇಲೆ ಉಂಟಾಗುತ್ತಿದೆ. ಜೊತೆಗೆ ಚಿನಿವಾರಪೇಟೆಯಲ್ಲೂ ಕುಸಿತ ಉಂಟಾಗಿದ್ದು, ಸದ್ಯಕ್ಕೆ ಚಿನ್ನ ಮತ್ತು ಬೆಳ್ಳಿದರಗಳು ಏರಿಕೆಯಾಗುವ ಸಾಧ್ಯತೆ ವಿರಳ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

14 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

15 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

16 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

16 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

17 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

19 hours ago